Homeದಲಿತ್ ಫೈಲ್ಸ್ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ...

ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

- Advertisement -
- Advertisement -

“ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ಪ್ರತಿಕ್ರಿಯಿಸಿದ್ದಾರೆ. ವಿಶೇಷ ನ್ಯಾಯಾಲಯವು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿದ ಬಳಿಕ ಸಂತ್ರಸ್ತ ಕುಟುಂಬ ಬೇಸರ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಖುಲಾಸೆಗೊಳಿಸಿ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಧೀಶರಾದ ತ್ರಿಲೋಕ್ ಪಾಲ್ ಸಿಂಗ್ ಅವರು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ನಂತರ ‘ದಿ ಕ್ವಿಂಟ್‌’ ಜೊತೆ ಮಾತನಾಡಿರುವ ಸಂತ್ರಸ್ತ ಯುವತಿಯ ಸಹೋದರ “ನಮ್ಮ ಕುಟುಂಬವು ಧ್ವಂಸಗೊಂಡಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಭಾರತೀಯ ನ್ಯಾಯಾಂಗದಿಂದ ನಾವು ಹೆಚ್ಚಿನ ಭರವಸೆ ಹೊಂದಿದ್ದೇವೆ. ಆದರೆ ನಮ್ಮ ಭಾರತೀಯ ನ್ಯಾಯ ವ್ಯವಸ್ಥೆ ಏನು ಎಂದು ಈಗ ನಮಗೆ ತಿಳಿದಿದೆ. ನಮ್ಮ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ನಂತರ ಆಕೆಯ ದೇಹವನ್ನು ಮಧ್ಯರಾತ್ರಿಯಲ್ಲಿ ಸುಡಲಾಗಿದೆ. ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದವರನ್ನು ಖುಲಾಸೆಗೊಳಿಸಲು ನ್ಯಾಯಾಲಯ ಅವಕಾಶ ನೀಡಿದೆ. ನಾವು ಧ್ವಂಸಗೊಂಡಿದ್ದೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಗ್ರಾಮದ ನಾಲ್ವರ ವಿರುದ್ಧ ಅತ್ಯಾಚಾರ (ಐಪಿಸಿ ಸೆಕ್ಷನ್ 376), ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376 ಡಿ) ಮತ್ತು ಕೊಲೆ (ಐಪಿಸಿ ಸೆಕ್ಷನ್ 304) ಆರೋಪ ಹೊರಿಸಿದೆ.

ಆದರೆ, ಅವರಲ್ಲಿ ಯಾರೊಬ್ಬರೂ ಅತ್ಯಾಚಾರ ಅಥವಾ ಕೊಲೆಯ ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಮಿಗಿಲಾಗಿ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಗುರುತಿಸಲ್ಪಟ್ಟಿರುವ ಆರೋಪಿ ಸಂದೀಪ್‌ಗೆ, ಕೊಲೆಗೆ ಸಮನಾಗದ (ಐಪಿಸಿ ಸೆಕ್ಷನ್ 304) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿನ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ.

“ಅತ್ಯಾಚಾರ ಮತ್ತು ಕೊಲೆ ಆರೋಪದಡಿಯಲ್ಲಿ ಆತನಿಗೆ ಶಿಕ್ಷೆಯಾಗಿಲ್ಲ. ಅಂದರೆ ಅವರಿಗೂ ಬೇಗ ಜಾಮೀನು ಸಿಗುವುದು ಖಚಿತ. ಇದು ಅತಿರೇಕದ ಸಂಗತಿ” ಎಂದು ಸಂತ್ರಸ್ತೆಯ ಸಹೋದರ ನೊಂದು ನುಡಿದಿದ್ದಾರೆ.

“ಉಸ್ಕಿ ಆತ್ಮಾ ಕೋ ಶಾಂತಿ ಕೈಸೇ ಮಿಲೇಗೀ? (ಅವಳ ಆತ್ಮ ಈಗ ಹೇಗೆ ವಿಶ್ರಾಂತಿ ಪಡೆಯುತ್ತದೆ?)” ಎಂದು ಪ್ರಶ್ನಿಸಿದ್ದಾರೆ.

‘ಗ್ರಾಮಸ್ಥರಿಂದ ಆರೋಪಿಗಳಿಗೆ ಬೆಂಬಲ’

ಸೆಪ್ಟೆಂಬರ್ 2020ರಲ್ಲಿ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಯಿತು. 29 ಸೆಪ್ಟೆಂಬರ್ 2020ರಂದು, ಹತ್ರಾಸ್ ಪೋಲೀಸ್ ಮತ್ತು ಆಡಳಿತದ ವರ್ಗವು ರಾತ್ರೋರಾತ್ರಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿತ್ತು. ಇದು ಬೆಳಕಿಗೆ ಬಂದಾಗ ದೇಶಾದ್ಯಂತ ಆಘಾತ ಉಂಟಾಗಿತ್ತು.

ಘಟನೆ ನಡೆದ ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ‘ದಿ ಕ್ವಿಂಟ್’ ತಂಡ ವರದಿ ಮಾಡುತ್ತಾ, “ಅಪರಾಧದ ಆರೋಪಿಗಳಿಗೆ ವ್ಯಾಪಕ ಬೆಂಬಲ ಮುಂದುವರಿದಿದೆ. ಆರೋಪಗಳನ್ನು ಸುಳ್ಳು ಎಂದು ಅನೇಕ ಗ್ರಾಮಸ್ಥರು ಹೇಳುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಾರೆ” ಎಂದಿತ್ತು.

“ಈ ಜನರು ಮೊದಲ ದಿನದಿಂದಲೂ ಆರೋಪಿಗಳನ್ನು ಬೆಂಬಲಿಸುತ್ತಿದ್ದಾರೆ. ಈಗ ಅವರನ್ನು ಖುಲಾಸೆಗೊಳಿಸುವ ತೀರ್ಪು ಬಂದಿರುವುದರಿಂದ ಗ್ರಾಮಸ್ಥರು ಆರೋಪಿಗಳಿಗೆ ಮತ್ತಷ್ಟು ಧೈರ್ಯ ತುಂಬಲಿದ್ದಾರೆ” ಎಂದು ಸಂತ್ರಸ್ತೆಯ ಸಹೋದರ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...