Homeದಲಿತ್ ಫೈಲ್ಸ್ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ...

ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

- Advertisement -
- Advertisement -

“ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ಪ್ರತಿಕ್ರಿಯಿಸಿದ್ದಾರೆ. ವಿಶೇಷ ನ್ಯಾಯಾಲಯವು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿದ ಬಳಿಕ ಸಂತ್ರಸ್ತ ಕುಟುಂಬ ಬೇಸರ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಖುಲಾಸೆಗೊಳಿಸಿ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಧೀಶರಾದ ತ್ರಿಲೋಕ್ ಪಾಲ್ ಸಿಂಗ್ ಅವರು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ನಂತರ ‘ದಿ ಕ್ವಿಂಟ್‌’ ಜೊತೆ ಮಾತನಾಡಿರುವ ಸಂತ್ರಸ್ತ ಯುವತಿಯ ಸಹೋದರ “ನಮ್ಮ ಕುಟುಂಬವು ಧ್ವಂಸಗೊಂಡಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಭಾರತೀಯ ನ್ಯಾಯಾಂಗದಿಂದ ನಾವು ಹೆಚ್ಚಿನ ಭರವಸೆ ಹೊಂದಿದ್ದೇವೆ. ಆದರೆ ನಮ್ಮ ಭಾರತೀಯ ನ್ಯಾಯ ವ್ಯವಸ್ಥೆ ಏನು ಎಂದು ಈಗ ನಮಗೆ ತಿಳಿದಿದೆ. ನಮ್ಮ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ನಂತರ ಆಕೆಯ ದೇಹವನ್ನು ಮಧ್ಯರಾತ್ರಿಯಲ್ಲಿ ಸುಡಲಾಗಿದೆ. ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದವರನ್ನು ಖುಲಾಸೆಗೊಳಿಸಲು ನ್ಯಾಯಾಲಯ ಅವಕಾಶ ನೀಡಿದೆ. ನಾವು ಧ್ವಂಸಗೊಂಡಿದ್ದೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಗ್ರಾಮದ ನಾಲ್ವರ ವಿರುದ್ಧ ಅತ್ಯಾಚಾರ (ಐಪಿಸಿ ಸೆಕ್ಷನ್ 376), ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376 ಡಿ) ಮತ್ತು ಕೊಲೆ (ಐಪಿಸಿ ಸೆಕ್ಷನ್ 304) ಆರೋಪ ಹೊರಿಸಿದೆ.

ಆದರೆ, ಅವರಲ್ಲಿ ಯಾರೊಬ್ಬರೂ ಅತ್ಯಾಚಾರ ಅಥವಾ ಕೊಲೆಯ ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಮಿಗಿಲಾಗಿ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಗುರುತಿಸಲ್ಪಟ್ಟಿರುವ ಆರೋಪಿ ಸಂದೀಪ್‌ಗೆ, ಕೊಲೆಗೆ ಸಮನಾಗದ (ಐಪಿಸಿ ಸೆಕ್ಷನ್ 304) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿನ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ.

“ಅತ್ಯಾಚಾರ ಮತ್ತು ಕೊಲೆ ಆರೋಪದಡಿಯಲ್ಲಿ ಆತನಿಗೆ ಶಿಕ್ಷೆಯಾಗಿಲ್ಲ. ಅಂದರೆ ಅವರಿಗೂ ಬೇಗ ಜಾಮೀನು ಸಿಗುವುದು ಖಚಿತ. ಇದು ಅತಿರೇಕದ ಸಂಗತಿ” ಎಂದು ಸಂತ್ರಸ್ತೆಯ ಸಹೋದರ ನೊಂದು ನುಡಿದಿದ್ದಾರೆ.

“ಉಸ್ಕಿ ಆತ್ಮಾ ಕೋ ಶಾಂತಿ ಕೈಸೇ ಮಿಲೇಗೀ? (ಅವಳ ಆತ್ಮ ಈಗ ಹೇಗೆ ವಿಶ್ರಾಂತಿ ಪಡೆಯುತ್ತದೆ?)” ಎಂದು ಪ್ರಶ್ನಿಸಿದ್ದಾರೆ.

‘ಗ್ರಾಮಸ್ಥರಿಂದ ಆರೋಪಿಗಳಿಗೆ ಬೆಂಬಲ’

ಸೆಪ್ಟೆಂಬರ್ 2020ರಲ್ಲಿ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಯಿತು. 29 ಸೆಪ್ಟೆಂಬರ್ 2020ರಂದು, ಹತ್ರಾಸ್ ಪೋಲೀಸ್ ಮತ್ತು ಆಡಳಿತದ ವರ್ಗವು ರಾತ್ರೋರಾತ್ರಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿತ್ತು. ಇದು ಬೆಳಕಿಗೆ ಬಂದಾಗ ದೇಶಾದ್ಯಂತ ಆಘಾತ ಉಂಟಾಗಿತ್ತು.

ಘಟನೆ ನಡೆದ ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ‘ದಿ ಕ್ವಿಂಟ್’ ತಂಡ ವರದಿ ಮಾಡುತ್ತಾ, “ಅಪರಾಧದ ಆರೋಪಿಗಳಿಗೆ ವ್ಯಾಪಕ ಬೆಂಬಲ ಮುಂದುವರಿದಿದೆ. ಆರೋಪಗಳನ್ನು ಸುಳ್ಳು ಎಂದು ಅನೇಕ ಗ್ರಾಮಸ್ಥರು ಹೇಳುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಾರೆ” ಎಂದಿತ್ತು.

“ಈ ಜನರು ಮೊದಲ ದಿನದಿಂದಲೂ ಆರೋಪಿಗಳನ್ನು ಬೆಂಬಲಿಸುತ್ತಿದ್ದಾರೆ. ಈಗ ಅವರನ್ನು ಖುಲಾಸೆಗೊಳಿಸುವ ತೀರ್ಪು ಬಂದಿರುವುದರಿಂದ ಗ್ರಾಮಸ್ಥರು ಆರೋಪಿಗಳಿಗೆ ಮತ್ತಷ್ಟು ಧೈರ್ಯ ತುಂಬಲಿದ್ದಾರೆ” ಎಂದು ಸಂತ್ರಸ್ತೆಯ ಸಹೋದರ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...