Homeಕರ್ನಾಟಕ'ನನ್ನ ಮಗ ಮೋದಿ ಅಭಿಮಾನಿ' ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

- Advertisement -
- Advertisement -

ಸಂಸತ್ತಿನ ಭಾರೀ ಭದ್ರತೆಯನ್ನು ಬೇದಿಸಿ, ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಸದನದೊಳಗೆ ಜಿಗಿದು ಆತಂಕ ಸೃಷ್ಠಿಸಿದ್ದ ಇಬ್ಬರು ಯುವಕರಲ್ಲಿ ಒಬ್ಬನಾಗಿರುವ ಮನೋರಂಜನ್ ಅಪ್ಪಟ ನರೇಂದ್ರ ಮೋದಿ ಅಭಿಮಾನಿ ಎಂದು ಖುದ್ದು ಆತನ ತಂದೆ ದೇವರಾಜ್ ಗೌಡ ಹೇಳಿದ್ದಾರೆ.

ಘಟನೆ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ‘ಪ್ರಧಾನಿಯವರ ಬಗ್ಗೆ ನನ್ನ ಮಗನಿಗೆ ಬಹಳ ಗೌರವ, ಒಳ್ಳೆಯ ಅಭಿಪ್ರಾಯ ಇತ್ತು. ಅಂಥಹ ಪ್ರಧಾನಿ ಸಿಕ್ಕಿರುವುದು ನಮಗೆ ಅದೃಷ್ಟ ಎನ್ನುತ್ತಿದ್ದ. ರಾಜಕೀಯ ಎಲ್ಲ ಬೇಡ ಎಂದು ಮಗನಿಗೆ ಹೇಳಿದ್ದೆ. ನಮ್ಮ ಕುಟುಂಬದ ಹಲವು ಮಂದಿ ರಾಜಕೀಯದಲ್ಲಿದ್ದರು’ ಎಂದು ಹೇಳಿದರು.

‘ಪ್ರತಾಪ್ ಸಿಂಹ ಅವರಿಗೆ ನಾವು ವೋಟ್ ಹಾಕುತ್ತೇವೆ, ನಮ್ಮ ಹೆಸರೇಳಿದ್ದಕ್ಕೆ ಅವರು ಪಾಸ್ ಕೊಟ್ಟಿರಬಹುದು, ಪಾಸ್ ಕೊಟ್ಟಿದ್ದರೆ ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬೇಕಲ್ಲವೇ? ಪ್ರತಾಪ್ ಸಿಂಹ ಅವರನ್ನು ಎಂಪಿ ಮಾಡಿದ್ದೆ ನಾವು. ಈಗಲೂ ನಾವು ಅವರಿಗೇ ವೋಟ್ ಹಾಕುತ್ತೇವೆ. ಆದರೆ, ನನ್ನ ಮಗ ಮಾಡಿದ್ದು ತಪ್ಪು’ ಎಂದರು.

‘ಮಗ ಎಲ್ಲಿಗೆ ಓದರೂ, ಏನೇ ಮಾಡಿದರೂ ಮೂರೇ ದಿನಕ್ಕೆ ಮನೆಗೆ ಬರುತ್ತಿದ್ದ; ಆತನಿಗೆ ಯಾವುದೆ ಕೆಟ್ಟ ಚಟ ಇಲ್ಲ. ಪೋಷಕರು ಮಕ್ಕಳಿಗೆ ಒಳ್ಳೆಯದನ್ನೆ ಬಯಸುತ್ತಾರೆ. ನಾವೂ ಅದನ್ನೇ ಮಾಡಿದ್ದೇವೆ’ ಎಂದು ಹೇಳಿದರು.

‘ನನ್ನ ಮಗ ಕೆಟ್ಟದ್ದು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ಸಮಾಜಕ್ಕೆ ಅನ್ಯಾಯ ಮಾಡಿದರೆ ಅವನು ನನ್ನ ಮಗನೇ ಅಲ್ಲ. ಅವನು ಕೆಟ್ಟ ಕೆಲಸ ಮಾಡುವವನಲ್ಲ; ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಕಾರಣಕ್ಕೆ ಅವನು ಒಂದು ಸಂಘಟನೆಯಲ್ಲಿದ್ದ. ನಾನು ಇದೆಲ್ಲಾ ಬೇಡ ಎಂದು ಬುದ್ಧಿ ಹೇಳಿದ್ದೆ. ಆದರೆ, ಅವನ ಅತಿಯಾದ ವಿದ್ಯಾಭ್ಯಾಸ ಹಾಗೂ ಓದು ಅವನಿಗೆ ಮುಳುವಾಗಿದೆ. ಇಂದು ನನ್ನ ಮಗ ಮಾಡಿರುವ ಕೆಲಸವನ್ನು ಯಾರೇ ಮಾಡಿದ್ದರೂ ಅವರನ್ನು ಗಲ್ಲಿಗೇರಿಸಬೇಕು’ ಎಂದರು.

‘ನನ್ನ ಮಗ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಓದಿಕೊಂಡಿದ್ದಾನೆ. ನಾವು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನವರಾಗಿದ್ದು, ನಮ್ಮದು ಕೃಷಿಕ ಕುಟುಂಬ. ಮಗನ ವಿದ್ಯಾಭ್ಯಾಕ್ಕಾಗಿ ನಾವು 15 ವರ್ಷಗಳ ಹಿಂದೆ ಮೈಸೂರಿಗೆ ಬಂದೆವು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅವನಿಗೆ ದೇವೇಗೌಡರು ಇಂಜಿನಿಯರಿಂಗ್ ಸೀಟು ಕೊಡಿಸಿದ್ದರು. ಅವನಿಗೋಸ್ಕರ ಕುರಿ ಸಾಗಾಣಿಕೆ ಹಾಗೂ ಕೋಳಿ ಸಾಗಾಣಿಕೆ ಮಾಡಿಕೊಟ್ಟಿದ್ದೇವೆ. ಮನೆ ಬಿಟ್ಟು ಎಲ್ಲೂ ಹೋಗುತ್ತಿರಲಿಲ್ಲ. ಆದರೆ, ಇತ್ತೀಚೆಗೆ ಬೆಂಗಳೂರಿ ಹೋಗಿ ಬರುತ್ತಿದ್ದ. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿಕೊಂಡಿದ್ದ, 35 ವರ್ಷ ಆದರೂ ಆತ ಇನ್ನೂ ಮದುವೆ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...