Homeಕರ್ನಾಟಕ'ನನ್ನ ಮಗ ಮೋದಿ ಅಭಿಮಾನಿ' ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

- Advertisement -
- Advertisement -

ಸಂಸತ್ತಿನ ಭಾರೀ ಭದ್ರತೆಯನ್ನು ಬೇದಿಸಿ, ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಸದನದೊಳಗೆ ಜಿಗಿದು ಆತಂಕ ಸೃಷ್ಠಿಸಿದ್ದ ಇಬ್ಬರು ಯುವಕರಲ್ಲಿ ಒಬ್ಬನಾಗಿರುವ ಮನೋರಂಜನ್ ಅಪ್ಪಟ ನರೇಂದ್ರ ಮೋದಿ ಅಭಿಮಾನಿ ಎಂದು ಖುದ್ದು ಆತನ ತಂದೆ ದೇವರಾಜ್ ಗೌಡ ಹೇಳಿದ್ದಾರೆ.

ಘಟನೆ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ‘ಪ್ರಧಾನಿಯವರ ಬಗ್ಗೆ ನನ್ನ ಮಗನಿಗೆ ಬಹಳ ಗೌರವ, ಒಳ್ಳೆಯ ಅಭಿಪ್ರಾಯ ಇತ್ತು. ಅಂಥಹ ಪ್ರಧಾನಿ ಸಿಕ್ಕಿರುವುದು ನಮಗೆ ಅದೃಷ್ಟ ಎನ್ನುತ್ತಿದ್ದ. ರಾಜಕೀಯ ಎಲ್ಲ ಬೇಡ ಎಂದು ಮಗನಿಗೆ ಹೇಳಿದ್ದೆ. ನಮ್ಮ ಕುಟುಂಬದ ಹಲವು ಮಂದಿ ರಾಜಕೀಯದಲ್ಲಿದ್ದರು’ ಎಂದು ಹೇಳಿದರು.

‘ಪ್ರತಾಪ್ ಸಿಂಹ ಅವರಿಗೆ ನಾವು ವೋಟ್ ಹಾಕುತ್ತೇವೆ, ನಮ್ಮ ಹೆಸರೇಳಿದ್ದಕ್ಕೆ ಅವರು ಪಾಸ್ ಕೊಟ್ಟಿರಬಹುದು, ಪಾಸ್ ಕೊಟ್ಟಿದ್ದರೆ ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬೇಕಲ್ಲವೇ? ಪ್ರತಾಪ್ ಸಿಂಹ ಅವರನ್ನು ಎಂಪಿ ಮಾಡಿದ್ದೆ ನಾವು. ಈಗಲೂ ನಾವು ಅವರಿಗೇ ವೋಟ್ ಹಾಕುತ್ತೇವೆ. ಆದರೆ, ನನ್ನ ಮಗ ಮಾಡಿದ್ದು ತಪ್ಪು’ ಎಂದರು.

‘ಮಗ ಎಲ್ಲಿಗೆ ಓದರೂ, ಏನೇ ಮಾಡಿದರೂ ಮೂರೇ ದಿನಕ್ಕೆ ಮನೆಗೆ ಬರುತ್ತಿದ್ದ; ಆತನಿಗೆ ಯಾವುದೆ ಕೆಟ್ಟ ಚಟ ಇಲ್ಲ. ಪೋಷಕರು ಮಕ್ಕಳಿಗೆ ಒಳ್ಳೆಯದನ್ನೆ ಬಯಸುತ್ತಾರೆ. ನಾವೂ ಅದನ್ನೇ ಮಾಡಿದ್ದೇವೆ’ ಎಂದು ಹೇಳಿದರು.

‘ನನ್ನ ಮಗ ಕೆಟ್ಟದ್ದು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ಸಮಾಜಕ್ಕೆ ಅನ್ಯಾಯ ಮಾಡಿದರೆ ಅವನು ನನ್ನ ಮಗನೇ ಅಲ್ಲ. ಅವನು ಕೆಟ್ಟ ಕೆಲಸ ಮಾಡುವವನಲ್ಲ; ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಕಾರಣಕ್ಕೆ ಅವನು ಒಂದು ಸಂಘಟನೆಯಲ್ಲಿದ್ದ. ನಾನು ಇದೆಲ್ಲಾ ಬೇಡ ಎಂದು ಬುದ್ಧಿ ಹೇಳಿದ್ದೆ. ಆದರೆ, ಅವನ ಅತಿಯಾದ ವಿದ್ಯಾಭ್ಯಾಸ ಹಾಗೂ ಓದು ಅವನಿಗೆ ಮುಳುವಾಗಿದೆ. ಇಂದು ನನ್ನ ಮಗ ಮಾಡಿರುವ ಕೆಲಸವನ್ನು ಯಾರೇ ಮಾಡಿದ್ದರೂ ಅವರನ್ನು ಗಲ್ಲಿಗೇರಿಸಬೇಕು’ ಎಂದರು.

‘ನನ್ನ ಮಗ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಓದಿಕೊಂಡಿದ್ದಾನೆ. ನಾವು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನವರಾಗಿದ್ದು, ನಮ್ಮದು ಕೃಷಿಕ ಕುಟುಂಬ. ಮಗನ ವಿದ್ಯಾಭ್ಯಾಕ್ಕಾಗಿ ನಾವು 15 ವರ್ಷಗಳ ಹಿಂದೆ ಮೈಸೂರಿಗೆ ಬಂದೆವು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅವನಿಗೆ ದೇವೇಗೌಡರು ಇಂಜಿನಿಯರಿಂಗ್ ಸೀಟು ಕೊಡಿಸಿದ್ದರು. ಅವನಿಗೋಸ್ಕರ ಕುರಿ ಸಾಗಾಣಿಕೆ ಹಾಗೂ ಕೋಳಿ ಸಾಗಾಣಿಕೆ ಮಾಡಿಕೊಟ್ಟಿದ್ದೇವೆ. ಮನೆ ಬಿಟ್ಟು ಎಲ್ಲೂ ಹೋಗುತ್ತಿರಲಿಲ್ಲ. ಆದರೆ, ಇತ್ತೀಚೆಗೆ ಬೆಂಗಳೂರಿ ಹೋಗಿ ಬರುತ್ತಿದ್ದ. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿಕೊಂಡಿದ್ದ, 35 ವರ್ಷ ಆದರೂ ಆತ ಇನ್ನೂ ಮದುವೆ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...