Homeಕರ್ನಾಟಕ'ನನ್ನ ಮಗ ಮೋದಿ ಅಭಿಮಾನಿ' ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

- Advertisement -
- Advertisement -

ಸಂಸತ್ತಿನ ಭಾರೀ ಭದ್ರತೆಯನ್ನು ಬೇದಿಸಿ, ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಸದನದೊಳಗೆ ಜಿಗಿದು ಆತಂಕ ಸೃಷ್ಠಿಸಿದ್ದ ಇಬ್ಬರು ಯುವಕರಲ್ಲಿ ಒಬ್ಬನಾಗಿರುವ ಮನೋರಂಜನ್ ಅಪ್ಪಟ ನರೇಂದ್ರ ಮೋದಿ ಅಭಿಮಾನಿ ಎಂದು ಖುದ್ದು ಆತನ ತಂದೆ ದೇವರಾಜ್ ಗೌಡ ಹೇಳಿದ್ದಾರೆ.

ಘಟನೆ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ‘ಪ್ರಧಾನಿಯವರ ಬಗ್ಗೆ ನನ್ನ ಮಗನಿಗೆ ಬಹಳ ಗೌರವ, ಒಳ್ಳೆಯ ಅಭಿಪ್ರಾಯ ಇತ್ತು. ಅಂಥಹ ಪ್ರಧಾನಿ ಸಿಕ್ಕಿರುವುದು ನಮಗೆ ಅದೃಷ್ಟ ಎನ್ನುತ್ತಿದ್ದ. ರಾಜಕೀಯ ಎಲ್ಲ ಬೇಡ ಎಂದು ಮಗನಿಗೆ ಹೇಳಿದ್ದೆ. ನಮ್ಮ ಕುಟುಂಬದ ಹಲವು ಮಂದಿ ರಾಜಕೀಯದಲ್ಲಿದ್ದರು’ ಎಂದು ಹೇಳಿದರು.

‘ಪ್ರತಾಪ್ ಸಿಂಹ ಅವರಿಗೆ ನಾವು ವೋಟ್ ಹಾಕುತ್ತೇವೆ, ನಮ್ಮ ಹೆಸರೇಳಿದ್ದಕ್ಕೆ ಅವರು ಪಾಸ್ ಕೊಟ್ಟಿರಬಹುದು, ಪಾಸ್ ಕೊಟ್ಟಿದ್ದರೆ ಅದನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಬೇಕಲ್ಲವೇ? ಪ್ರತಾಪ್ ಸಿಂಹ ಅವರನ್ನು ಎಂಪಿ ಮಾಡಿದ್ದೆ ನಾವು. ಈಗಲೂ ನಾವು ಅವರಿಗೇ ವೋಟ್ ಹಾಕುತ್ತೇವೆ. ಆದರೆ, ನನ್ನ ಮಗ ಮಾಡಿದ್ದು ತಪ್ಪು’ ಎಂದರು.

‘ಮಗ ಎಲ್ಲಿಗೆ ಓದರೂ, ಏನೇ ಮಾಡಿದರೂ ಮೂರೇ ದಿನಕ್ಕೆ ಮನೆಗೆ ಬರುತ್ತಿದ್ದ; ಆತನಿಗೆ ಯಾವುದೆ ಕೆಟ್ಟ ಚಟ ಇಲ್ಲ. ಪೋಷಕರು ಮಕ್ಕಳಿಗೆ ಒಳ್ಳೆಯದನ್ನೆ ಬಯಸುತ್ತಾರೆ. ನಾವೂ ಅದನ್ನೇ ಮಾಡಿದ್ದೇವೆ’ ಎಂದು ಹೇಳಿದರು.

‘ನನ್ನ ಮಗ ಕೆಟ್ಟದ್ದು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ಸಮಾಜಕ್ಕೆ ಅನ್ಯಾಯ ಮಾಡಿದರೆ ಅವನು ನನ್ನ ಮಗನೇ ಅಲ್ಲ. ಅವನು ಕೆಟ್ಟ ಕೆಲಸ ಮಾಡುವವನಲ್ಲ; ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಕಾರಣಕ್ಕೆ ಅವನು ಒಂದು ಸಂಘಟನೆಯಲ್ಲಿದ್ದ. ನಾನು ಇದೆಲ್ಲಾ ಬೇಡ ಎಂದು ಬುದ್ಧಿ ಹೇಳಿದ್ದೆ. ಆದರೆ, ಅವನ ಅತಿಯಾದ ವಿದ್ಯಾಭ್ಯಾಸ ಹಾಗೂ ಓದು ಅವನಿಗೆ ಮುಳುವಾಗಿದೆ. ಇಂದು ನನ್ನ ಮಗ ಮಾಡಿರುವ ಕೆಲಸವನ್ನು ಯಾರೇ ಮಾಡಿದ್ದರೂ ಅವರನ್ನು ಗಲ್ಲಿಗೇರಿಸಬೇಕು’ ಎಂದರು.

‘ನನ್ನ ಮಗ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಓದಿಕೊಂಡಿದ್ದಾನೆ. ನಾವು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನವರಾಗಿದ್ದು, ನಮ್ಮದು ಕೃಷಿಕ ಕುಟುಂಬ. ಮಗನ ವಿದ್ಯಾಭ್ಯಾಕ್ಕಾಗಿ ನಾವು 15 ವರ್ಷಗಳ ಹಿಂದೆ ಮೈಸೂರಿಗೆ ಬಂದೆವು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅವನಿಗೆ ದೇವೇಗೌಡರು ಇಂಜಿನಿಯರಿಂಗ್ ಸೀಟು ಕೊಡಿಸಿದ್ದರು. ಅವನಿಗೋಸ್ಕರ ಕುರಿ ಸಾಗಾಣಿಕೆ ಹಾಗೂ ಕೋಳಿ ಸಾಗಾಣಿಕೆ ಮಾಡಿಕೊಟ್ಟಿದ್ದೇವೆ. ಮನೆ ಬಿಟ್ಟು ಎಲ್ಲೂ ಹೋಗುತ್ತಿರಲಿಲ್ಲ. ಆದರೆ, ಇತ್ತೀಚೆಗೆ ಬೆಂಗಳೂರಿ ಹೋಗಿ ಬರುತ್ತಿದ್ದ. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿಕೊಂಡಿದ್ದ, 35 ವರ್ಷ ಆದರೂ ಆತ ಇನ್ನೂ ಮದುವೆ ಆಗಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...