Homeಮುಖಪುಟ`ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ’: ಕುಸ್ತಿಪಟುಗಳ ಹೋರಾಟ ಸ್ಥಳಕ್ಕೆ ಪಿ.ಟಿ.ಉಷಾ ಭೇಟಿ

`ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ’: ಕುಸ್ತಿಪಟುಗಳ ಹೋರಾಟ ಸ್ಥಳಕ್ಕೆ ಪಿ.ಟಿ.ಉಷಾ ಭೇಟಿ

ಲೈಂಗಿಕ ಕಿರುಕುಳ ಎಸಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳು ಹೋರಾಡುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಯುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ ಕೆಲವು ದಿನಗಳ ನಂತರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಅವರು ಇಂದು (ಬುಧವಾರ) ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ.

ಮಾಜಿ ಒಲಿಂಪಿಯನ್‌ ಆಗಿರುವ ಪಿಟಿ ಉಷಾ, ಅಲ್ಲಿ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡದೆ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಿದರು, ಆದರೆ ಕುಸ್ತಿಪಟು ಬಜರಂಗ್ ಪುನಿಯಾ ಅವರು, ತಮ್ಮೊಂದಿಗೆ ಪಿ.ಟಿ.ಉಷಾ ಅವರು ಆಡಿರುವ ಮಾತುಗಳನ್ನು ಹಂಚಿಕೊಂಡಿದ್ದಾರೆ.

”ಆಟಗಾರರಿಗೆ ಸಹಾಯ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ. ಉಷಾ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ. ನಾನು ಮೊದಲು ಕ್ರೀಡಾಪಟು ಮತ್ತು ನಂತರ ಅಧಿಕಾರಿ ಅವರು ಸ್ಪಷ್ಟಪಡಿಸಿರುವ ಅವರು, ನಮ್ಮೊಂದಿಗಿರುವುದಾಗಿ ತಿಳಿಸಿದ್ದಾರೆ’’ ಎಂದು ಪುನಿಯಾ ವಿವರಿಸಿದ್ದಾರೆ.

“ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನಮಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಿದ್ದಾರೆ’’ ಎಂದು ಮಾಹಿತಿ ನೀಡಿದ್ದಾರೆ.

”ಈಗ ಬಂದಿರುವ  ಆರೋಪಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ನಿಯೋಜಿಸಲಾಗಿರುವ ಸಮಿತಿ ವರದಿ ನೀಡುವ ಮುನ್ನವೇ ಪ್ರತಿಭಟನೆ ನಡೆಸಲಾಗುತ್ತಿದೆ’’ ಉಷಾ ಅವರು ಕೆಲವು ದಿನಗಳ ಹಿಂದೆ ಟೀಕಿಸಿದ್ದರು.

“ಪ್ರತಿಭಟನೆಯು ಅಶಿಸ್ತಿಗೆ ಸಮಾನವಾಗಿದೆ” ಎಂದಿದ್ದರು.

“ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಅವರು ಮಾಡಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಅಭಿಪ್ರಾಯ ತಾಳಿದ್ದರು.

ಕುಸ್ತಿಪಟುಗಳು ಉಷಾ ಅವರ ಹೇಳಿಕೆಯನ್ನು ಕಟುವಾಗಿ ವಿರೋಧಿಸಿದ್ದರು. ”ಅವರು ನಮ್ಮನ್ನು ಬೆಂಬಲಿಸುತ್ತಾರೆಂದು ಕಾಯುತ್ತಿದ್ದೆವು. ಆದರೆ ಅವರ ಈ ಅಭಿಪ್ರಾಯಗಳಿಂದ ನೋವುಂಟಾಗಿದೆ’’ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಬೇಸರ ವ್ಯಕ್ತಪಡಿಸಿದ್ದರು.

“ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ತೋರಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ಪ್ರತಿಭಟನೆ ಮಾಡುತ್ತಿರಲಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿಕೆ ನೀಡಿದ್ದರು.

”ಉಷಾ ಅವರು ಕೆಲವು ರೀತಿಯ ಒತ್ತಡಕ್ಕೆ ಒಳಗಾಗಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ’’ ಎಂದು ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯಿಸಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಬಂದಿರುವ ಲೈಂಗಿಕ ಕಿರುಕುಳದ ಆರೋಪ ಸಂಬಂಧ ಭಾರತದ ಪ್ರಮುಖ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಲವಾರು ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ತಮ್ಮ ಧರಣಿ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಭಾರತದ ಅಗ್ರ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣವನ್ನು ಆಲಿಸಿದ ಕೆಲವು ಗಂಟೆಗಳ ನಂತರ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ಸುಮಾರು ನಾಲ್ಕು ತಿಂಗಳ ನಂತರ ಕುಸ್ತಿಪಟುಗಳು ಆರೋಪಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

“ಇದು ವಿಜಯದತ್ತ ನಮ್ಮ ಮೊದಲ ಹೆಜ್ಜೆಯಾಗಿದೆ, ಆದರೆ ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಮಲಿಕ್ ಹೇಳಿದ್ದಾರೆ. “ನಾವು ಸುದೀರ್ಘ ಯುದ್ಧಕ್ಕಾಗಿ ಇಲ್ಲಿದ್ದೇವೆ. ಆಂತರಿಕ ಸಮಾಲೋಚನೆಯ ನಂತರ ನಾವು ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ದೆಹಲಿ ಪೊಲೀಸರ ಮೇಲೆ ಕುಸ್ತಿಪಟುಗಳು ನಂಬಿಕೆ ಕಳೆದುಕೊಂಡಿದ್ದಾರೆ. ಏಕೆಂದರೆ ಅವರು ಆರು ದಿನಗಳನ್ನು ತೆಗೆದುಕೊಂಡರು ಮತ್ತು ಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು” ಎಂದು ಫೋಗಟ್ ಹೇಳಿದ್ದಾರೆ.

“ನಾವು ಈಗಾಗಲೇ ಸಾಕಷ್ಟು ಪುರಾವೆಗಳನ್ನು ನೀಡಿದ್ದೇವೆ ಮತ್ತು ಬೇರೆ ಏನಾದರೂ ಅಗತ್ಯವಿದ್ದರೆ, ನಾವು ಅದನ್ನು ಸುಪ್ರೀಂ ಕೋರ್ಟ್‌ಗೆ ಪ್ರಸ್ತುತಪಡಿಸುತ್ತೇವೆಯೇ ಹೊರತು ದೆಹಲಿ ಪೊಲೀಸರಿಗೆ ಅಲ್ಲ. ಇದು ಎಫ್‌ಐಆರ್ ದಾಖಲಿಸುವ ಹೋರಾಟವಲ್ಲ. ಈಗಾಗಲೇ 85 ಪ್ರಕರಣಗಳಿರುವ ವ್ಯಕ್ತಿಯ ವಿರುದ್ಧದ ಹೋರಾಟವಾಗಿದೆ. ನಾವು ಭ್ರಷ್ಟರನ್ನು ಕುಸ್ತಿಯಿಂದ ಮುಕ್ತಗೊಳಿಸಬೇಕಾಗಿದೆ” ಎಂದಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ಅವರನ್ನು ಎಲ್ಲಾ ಸ್ಥಾನಗಳಿಂದ ವಜಾಗೊಳಿಸುವಂತೆ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

“ಕಂಬಿ ಹಿಂದೆ ಹಾಕುವವರೆಗೂ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರು ಮುಂದುವರಿಸುತ್ತಾರೆ” ಎಂದು ಪುನಿಯಾ ತಿಳಿಸಿದ್ದಾರೆ.

“ಪ್ರತಿಭಟಿಸುವ ನಮಗೆಲ್ಲರಿಗೂ ಭದ್ರತೆ ಬೇಕು, ದೂರುದಾರರಿಗೆ ಭದ್ರತೆ ಬೇಕು. ಏಕೆಂದರೆ ನಮಗೆ ಯಾರು ಹಾನಿ ಮಾಡಲು ಬಯಸುತ್ತಾರೆ ಎಂದು ನಿಮಗೆ ತಿಳಿದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯಲ್ಲಿ ಆತನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಮೊದಲ ಪ್ರಕರಣ ದಾಖಲಿಸಲಾಗಿದೆ. ವಯಸ್ಕ ಕುಸ್ತಿಪಟುಗಳು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ ಆರು ಬಾರಿ ಬಿಜೆಪಿ ಸಂಸದರಾಗಿ ಗೆದ್ದಿರುವ, ಆರೋಪಿ ಬ್ರಿಜ್‌ ಭೂಷಣ್ ಸಿಂಗ್ ಆರೋಪಗಳನ್ನು ನಿರಾಕರಿಸುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...