Homeಮುಖಪುಟ`ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ’: ಕುಸ್ತಿಪಟುಗಳ ಹೋರಾಟ ಸ್ಥಳಕ್ಕೆ ಪಿ.ಟಿ.ಉಷಾ ಭೇಟಿ

`ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ’: ಕುಸ್ತಿಪಟುಗಳ ಹೋರಾಟ ಸ್ಥಳಕ್ಕೆ ಪಿ.ಟಿ.ಉಷಾ ಭೇಟಿ

ಲೈಂಗಿಕ ಕಿರುಕುಳ ಎಸಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳು ಹೋರಾಡುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಯುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ ಕೆಲವು ದಿನಗಳ ನಂತರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಅವರು ಇಂದು (ಬುಧವಾರ) ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ.

ಮಾಜಿ ಒಲಿಂಪಿಯನ್‌ ಆಗಿರುವ ಪಿಟಿ ಉಷಾ, ಅಲ್ಲಿ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡದೆ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಿದರು, ಆದರೆ ಕುಸ್ತಿಪಟು ಬಜರಂಗ್ ಪುನಿಯಾ ಅವರು, ತಮ್ಮೊಂದಿಗೆ ಪಿ.ಟಿ.ಉಷಾ ಅವರು ಆಡಿರುವ ಮಾತುಗಳನ್ನು ಹಂಚಿಕೊಂಡಿದ್ದಾರೆ.

”ಆಟಗಾರರಿಗೆ ಸಹಾಯ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ. ಉಷಾ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ. ನಾನು ಮೊದಲು ಕ್ರೀಡಾಪಟು ಮತ್ತು ನಂತರ ಅಧಿಕಾರಿ ಅವರು ಸ್ಪಷ್ಟಪಡಿಸಿರುವ ಅವರು, ನಮ್ಮೊಂದಿಗಿರುವುದಾಗಿ ತಿಳಿಸಿದ್ದಾರೆ’’ ಎಂದು ಪುನಿಯಾ ವಿವರಿಸಿದ್ದಾರೆ.

“ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನಮಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಿದ್ದಾರೆ’’ ಎಂದು ಮಾಹಿತಿ ನೀಡಿದ್ದಾರೆ.

”ಈಗ ಬಂದಿರುವ  ಆರೋಪಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ನಿಯೋಜಿಸಲಾಗಿರುವ ಸಮಿತಿ ವರದಿ ನೀಡುವ ಮುನ್ನವೇ ಪ್ರತಿಭಟನೆ ನಡೆಸಲಾಗುತ್ತಿದೆ’’ ಉಷಾ ಅವರು ಕೆಲವು ದಿನಗಳ ಹಿಂದೆ ಟೀಕಿಸಿದ್ದರು.

“ಪ್ರತಿಭಟನೆಯು ಅಶಿಸ್ತಿಗೆ ಸಮಾನವಾಗಿದೆ” ಎಂದಿದ್ದರು.

“ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಅವರು ಮಾಡಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಅಭಿಪ್ರಾಯ ತಾಳಿದ್ದರು.

ಕುಸ್ತಿಪಟುಗಳು ಉಷಾ ಅವರ ಹೇಳಿಕೆಯನ್ನು ಕಟುವಾಗಿ ವಿರೋಧಿಸಿದ್ದರು. ”ಅವರು ನಮ್ಮನ್ನು ಬೆಂಬಲಿಸುತ್ತಾರೆಂದು ಕಾಯುತ್ತಿದ್ದೆವು. ಆದರೆ ಅವರ ಈ ಅಭಿಪ್ರಾಯಗಳಿಂದ ನೋವುಂಟಾಗಿದೆ’’ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಬೇಸರ ವ್ಯಕ್ತಪಡಿಸಿದ್ದರು.

“ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ತೋರಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ಪ್ರತಿಭಟನೆ ಮಾಡುತ್ತಿರಲಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿಕೆ ನೀಡಿದ್ದರು.

”ಉಷಾ ಅವರು ಕೆಲವು ರೀತಿಯ ಒತ್ತಡಕ್ಕೆ ಒಳಗಾಗಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ’’ ಎಂದು ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯಿಸಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಬಂದಿರುವ ಲೈಂಗಿಕ ಕಿರುಕುಳದ ಆರೋಪ ಸಂಬಂಧ ಭಾರತದ ಪ್ರಮುಖ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಲವಾರು ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ತಮ್ಮ ಧರಣಿ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಭಾರತದ ಅಗ್ರ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣವನ್ನು ಆಲಿಸಿದ ಕೆಲವು ಗಂಟೆಗಳ ನಂತರ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ಸುಮಾರು ನಾಲ್ಕು ತಿಂಗಳ ನಂತರ ಕುಸ್ತಿಪಟುಗಳು ಆರೋಪಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

“ಇದು ವಿಜಯದತ್ತ ನಮ್ಮ ಮೊದಲ ಹೆಜ್ಜೆಯಾಗಿದೆ, ಆದರೆ ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಮಲಿಕ್ ಹೇಳಿದ್ದಾರೆ. “ನಾವು ಸುದೀರ್ಘ ಯುದ್ಧಕ್ಕಾಗಿ ಇಲ್ಲಿದ್ದೇವೆ. ಆಂತರಿಕ ಸಮಾಲೋಚನೆಯ ನಂತರ ನಾವು ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ದೆಹಲಿ ಪೊಲೀಸರ ಮೇಲೆ ಕುಸ್ತಿಪಟುಗಳು ನಂಬಿಕೆ ಕಳೆದುಕೊಂಡಿದ್ದಾರೆ. ಏಕೆಂದರೆ ಅವರು ಆರು ದಿನಗಳನ್ನು ತೆಗೆದುಕೊಂಡರು ಮತ್ತು ಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು” ಎಂದು ಫೋಗಟ್ ಹೇಳಿದ್ದಾರೆ.

“ನಾವು ಈಗಾಗಲೇ ಸಾಕಷ್ಟು ಪುರಾವೆಗಳನ್ನು ನೀಡಿದ್ದೇವೆ ಮತ್ತು ಬೇರೆ ಏನಾದರೂ ಅಗತ್ಯವಿದ್ದರೆ, ನಾವು ಅದನ್ನು ಸುಪ್ರೀಂ ಕೋರ್ಟ್‌ಗೆ ಪ್ರಸ್ತುತಪಡಿಸುತ್ತೇವೆಯೇ ಹೊರತು ದೆಹಲಿ ಪೊಲೀಸರಿಗೆ ಅಲ್ಲ. ಇದು ಎಫ್‌ಐಆರ್ ದಾಖಲಿಸುವ ಹೋರಾಟವಲ್ಲ. ಈಗಾಗಲೇ 85 ಪ್ರಕರಣಗಳಿರುವ ವ್ಯಕ್ತಿಯ ವಿರುದ್ಧದ ಹೋರಾಟವಾಗಿದೆ. ನಾವು ಭ್ರಷ್ಟರನ್ನು ಕುಸ್ತಿಯಿಂದ ಮುಕ್ತಗೊಳಿಸಬೇಕಾಗಿದೆ” ಎಂದಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ಅವರನ್ನು ಎಲ್ಲಾ ಸ್ಥಾನಗಳಿಂದ ವಜಾಗೊಳಿಸುವಂತೆ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

“ಕಂಬಿ ಹಿಂದೆ ಹಾಕುವವರೆಗೂ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರು ಮುಂದುವರಿಸುತ್ತಾರೆ” ಎಂದು ಪುನಿಯಾ ತಿಳಿಸಿದ್ದಾರೆ.

“ಪ್ರತಿಭಟಿಸುವ ನಮಗೆಲ್ಲರಿಗೂ ಭದ್ರತೆ ಬೇಕು, ದೂರುದಾರರಿಗೆ ಭದ್ರತೆ ಬೇಕು. ಏಕೆಂದರೆ ನಮಗೆ ಯಾರು ಹಾನಿ ಮಾಡಲು ಬಯಸುತ್ತಾರೆ ಎಂದು ನಿಮಗೆ ತಿಳಿದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯಲ್ಲಿ ಆತನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಮೊದಲ ಪ್ರಕರಣ ದಾಖಲಿಸಲಾಗಿದೆ. ವಯಸ್ಕ ಕುಸ್ತಿಪಟುಗಳು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ ಆರು ಬಾರಿ ಬಿಜೆಪಿ ಸಂಸದರಾಗಿ ಗೆದ್ದಿರುವ, ಆರೋಪಿ ಬ್ರಿಜ್‌ ಭೂಷಣ್ ಸಿಂಗ್ ಆರೋಪಗಳನ್ನು ನಿರಾಕರಿಸುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...