Homeಮುಖಪುಟಕಿರುಕುಳ ನೀಡುವ ಉದ್ದೇಶದಿಂದ ನನ್ನ ವರ್ಗಾವಣೆ ಮಾಡಲಾಗಿತ್ತು: ಜಸ್ಟಿಸ್‌ ದಿವಾಕರ್

ಕಿರುಕುಳ ನೀಡುವ ಉದ್ದೇಶದಿಂದ ನನ್ನ ವರ್ಗಾವಣೆ ಮಾಡಲಾಗಿತ್ತು: ಜಸ್ಟಿಸ್‌ ದಿವಾಕರ್

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಕೊಲಿಜಿಯಂ ಛತ್ತೀಸ್‌ಗಢ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ನನ್ನ ವರ್ಗಾವಣೆಯನ್ನು ಕಿರುಕುಳ ನೀಡುವ ಉದ್ದೇಶದಿಂದ ಮಾಡಿತ್ತು ಎಂದು ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಹೇಳಿದ್ದಾರೆ.

2009ರ ಮಾ.31ರಂದು ನನ್ನನ್ನು ಛತ್ತೀಸಗಢ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳಿಸಲಾಗಿದೆ. ನಾನು ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ ಅ.2018ರವರೆಗೆ ನ್ಯಾಯಾಧೀಶನಾಗಿ ತೃಪ್ತಿಯಿಂದ ಕೆಲಸ ನಿರ್ವಹಿಸಿದ್ದೇನೆ. ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಲಹಾಬಾದ್ ಹೈಕೋರ್ಟ್‌ಗೆ ನನ್ನನ್ನು ದಿಡೀರ್‌ ವರ್ಗಾವಣೆ ಮಾಡಿದರು. ನನಗೆ ಈವರೆಗೆ ಯಾಕೆ ವರ್ಗಾವಣೆ ಮಾಡಿದ್ದಾರೆ ಎಂದು ಗೊತ್ತಿಲ್ಲ, ನಾನು 2018ರ ಅ.3ರಂದು ಅಧಿಕಾರವನ್ನು ವಹಿಸಿಕೊಂಡೆ ಎಂದು ಜಸ್ಟಿಸ್ ಪ್ರಿತಿಂಕರ್ ದಿವಾಕರ್ ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.

ನನಗೆ ಕಿರುಕುಳ ನೀಡುವ ದುರುದ್ದೇಶದಿಂದ ನನ್ನ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿದೆ ಎಂದು ತೋರುತ್ತಿದೆ. ಆದರೆ ಅದೃಷ್ಟವಶಾತ್ ನನ್ನ ಸಹವರ್ತಿ ನ್ಯಾಯಾಧೀಶರು ಮತ್ತು ವಕೀಲರು ನನಗೆ ಅಪಾರ ಬೆಂಬಲ ಮತ್ತು ಸಹಕಾರ ನೀಡಿದ್ದರಿಂದ ವರ್ಗಾವಣೆಯು ನನಗೆ ವರವಾಗಿ ಪರಿಣಮಿಸಿತು ಎಂದು ಅವರು ಹೇಳಿದ್ದಾರೆ.

ಈ ಮೊದಲು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪ್ರಸ್ತುತ ಕೊಲಿಜಿಯಂ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾಯಮೂರ್ತಿ ದಿವಾಕರ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ನನಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ದಿವಾಕರ್, ನ.1 2000ದಂದು ಛತ್ತೀಸ್‌ಗಢದ ಹೈಕೋರ್ಟ್ ಅಸ್ತಿತ್ವಕ್ಕೆ ಬಂದಿತ್ತು. ಹೀಗಾಗಿ ನಾನು ಬಿಲಾಸ್‌ಪುರಕ್ಕೆ ಸ್ಥಳಾಂತರಗೊಂಡೆ. 2009ರಲ್ಲಿ ಕೊಲಿಜಿಯಂ ನನಗೆ ನ್ಯಾಯಾಧೀಶರ ಸ್ಥಾನವನ್ನು ನೀಡಿದಾಗ, ನಾನು ಅಂತಹ ಪ್ರಸ್ತಾಪವನ್ನು ಸ್ವೀಕರಿಸಲು ಆರಂಭದಲ್ಲಿ ಹಿಂಜರಿದಿದ್ದೆ. ಆದರೆ ಅಂತಿಮವಾಗಿ ನನ್ನ ಕುಟುಂಬ ಮತ್ತು ಹಿತೈಷಿಗಳೊಂದಿಗೆ  ಚರ್ಚೆಯ ನಂತರ ನಾನು ನ್ಯಾಯಾಧೀಶರಾಗಲು ನನ್ನ ಒಪ್ಪಿಗೆಯನ್ನು ನೀಡಿದ್ದೇನೆ. ವಿಶಿಷ್ಟವಾದ ಕಾರ್ಯಶೈಲಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ಈ ಮಹಾನ್ ನ್ಯಾಯಾಲಯದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಯಾವಾಗಲೂ ಹೆಮ್ಮೆಯ ವಿಷಯವಾಗಿದೆ ಎಂದು ನ್ಯಾಯಮೂರ್ತಿ ದಿವಾಕರ್ ಹೇಳಿದರು.

ಭಾರೀ ಕೆಲಸದ ಹೊರೆಯನ್ನು ಸಮತೋಲನಗೊಳಿಸುವುದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಒಂದು ಸವಾಲಾಗಿದೆ. ಇದಲ್ಲದೆ ಈ ನ್ಯಾಯಾಲಯವು ಅದರ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ  ಟೀಕೆಗೆ ಒಳಗಾಗಿತ್ತು. ಆದರೆ ಟೀಕೆ ಮಾಡುವವರು ಒಂದು ನಿರ್ದಿಷ್ಟ ತೀರ್ಮಾನಕ್ಕೆ ಬರುವ ಮೊದಲು ಅಲ್ಲಿನ ಚಾಲ್ತಿಯಲ್ಲಿರುವ ತೊಂದರೆಗಳು ಮತ್ತು ನ್ಯೂನತೆಗಳ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಪ್ರೊಡಕ್ಟ್‌ಗೆ 1 ಕೋಟಿ ದಂಡ ಹಾಕುತ್ತೇವೆ: ಬಾಬಾ ರಾಮ್‌ ದೇವ್‌ಗೆ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...