Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...