Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...