Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...