Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...