Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...