Homeಅಂತರಾಷ್ಟ್ರೀಯಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

- Advertisement -
- Advertisement -

ಮಯನ್ಮಾರ್‌ನಲ್ಲಿ ಮಿಲಿಟರಿ ಪಡೆಗಳು ಕನಿಷ್ಠ 50 ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿನ ಆಡಳಿತಾರೂಢ ಪಕ್ಷ ಒಂದು ವರ್ಷ ತುರ್ತುಪರಿಸ್ಥಿತಿ ಹೇರಿ, ಮಿಲಿಟರಿ ಆಡಳಿತಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಈ ಪ್ರತಿಭಟನೆ ಆರಂಭವಾಗಿದ್ದು, ಅಂದಿನಿಂದಲೂ ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದೆ.

“50 ಜನ ಪ್ರತಿಭಟನಾಕಾರರು ಮಿಲಿಟರಿ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ. ಇದು ಸಶಸ್ತ್ರ ಪಡೆಗಳಿಗೆ ಅವಮಾನಕರವಾದ ದಿನ” ಎಂದು ಪದಚ್ಯುತ ಶಾಸಕರು ಸ್ಥಾಪಿಸಿದ ಜುಂಟಾ ವಿರೋಧಿ ಗುಂಪಿನ ಸಿಆರ್‌ಪಿಹೆಚ್‌ನ ವಕ್ತಾರ ಡಾ.ಸಾಸಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶನಿವಾರ ಬೆಳಿಗ್ಗೆ ಯಾಂಗೊನ್‌ನ ದಲಾ ಉಪನಗರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಜನಸಮೂಹದ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ವರದಿ ಮಾಡಿದೆ. ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಇನ್ಸೈನ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 21 ವರ್ಷದೊಳಗಿನ ಫುಟ್ಬಾಲ್ ತಂಡದಲ್ಲಿ ಆಡುವ ಯುವಕ ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ನೆರೆಹೊರೆಯವರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮ್ಯಾಂಡಲೆನಲ್ಲಿ ನಡೆದ ವಿವಿಧ ಘಟನೆಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ಹೇಳಿದೆ. ಮ್ಯಾಂಡಲೆ ಬಳಿಯ ಸಾಗಿಂಗ್ ಪ್ರದೇಶ, ಪೂರ್ವದ ಲಾಶಿಯೊ ಪಟ್ಟಣ, ಬಾಗೊ ಪ್ರದೇಶದಲ್ಲಿ, ಯಾಂಗೊನ್ ಬಳಿ ಮತ್ತು ಇತರೆಡೆಗಳಿಂದ ಸಾವುಗಳು ವರದಿಯಾಗಿವೆ ಎಂದು ಅದು ಹೇಳಿದೆ.

ಶನಿವಾರ ಒಟ್ಟು 50 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ನೌ ಹೇಳಿದೆ. ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ ಎಂದು ವಿಶ್ವಸಂಸ್ಥೆ ಒತ್ತಾಯಿಸಿತ್ತು. ಆದರೆ ಅಲ್ಲಿನ ಮಿಲಿಟರಿ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಈ ರೀತಿ ಪ್ರಯತ್ನಿಸುತ್ತಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮ್ಯಾನ್ಮಾರ್‌ನಲ್ಲಿನ ಫೆ.1ರಿಂದಲೂ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...