Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...