Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...