Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...