Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...