Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....