Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...