Homeಅಂತರಾಷ್ಟ್ರೀಯಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

- Advertisement -
- Advertisement -

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ.

ರಾಷ್ಟ್ರದ ಅತಿದೊಡ್ಡ ನಗರವಾದ ಯಾಂಗೊನ್‌ನಲ್ಲಿ ಪ್ರತಿಭಟನಾಕಾರರು ಒಟ್ಟುಗೂಡಿದ್ದು, ಅಲ್ಲಿ ವಾಹನಗಳನ್ನು ಅಡ್ಡಯಿಟ್ಟು ಸೈನ್ಯವು ಚಲಿಸದಂತೆ ತಡೆದ್ದಾರೆ. ಯಾಂಗೋನ್‌‌ನಲ್ಲಿ ಸೈನ್ಯವನ್ನು ನೇಮಿಸಲಾಗಿದ್ದು ಪರಿಸ್ಥಿತಿಯು ಹಿಂಸೆಗೆ ತಿರುಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ಯ್ರೂಸ್ ಎಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

“ಮಯನ್ಮಾರ್‌‌ನಲ್ಲಿ ಫೆಬ್ರವರಿ 1 ರಂದು ದೇಶದ ಆಡಳಿತವನ್ನು ವಶಕ್ಕೆ ಪಡೆದಾಗ ನಡೆದ ಹಿಂಸಾಚಾರಕ್ಕಿಂತ ಬುಧವಾರದಂದು ಹೆಚ್ಚಿನ ಪ್ರಮಾಣದಲ್ಲಿ ಹಿಂಸಾಚಾರದ ಸಾಧ್ಯತೆಯಿದೆ. ಈ ಹಿಂದಿನ ಸೈನ್ಯದ ಕ್ಷಿಪ್ರಕ್ರಾಂತಿಯಲ್ಲೂ ಕೊಲೆಗಳು, ನಾಪತ್ತೆ ಪ್ರಕರಣಗಳು, ಬಂಧನಗಳು ನಡೆಯುತ್ತಿದ್ದವು” ಎಂದು ಆಂಡ್ರ್ಯೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಯಾನ್ಮಾರ್‌‌‌ ಕುರಿತು ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಕಳವಳಗಳನ್ನು ವ್ಯಕ್ತಪಡಿಸಿದ್ದು, “ದೇಶದಲ್ಲಿ ಸುಮಾರು 21 ಜನಾಂಗೀಯ ಸಶಸ್ತ್ರ ಸಂಘಟನೆಗಳು ಸೈನ್ಯದ ಕ್ಷಿಪ್ರಕ್ರಾಂತಿಗೆ ವಿರುದ್ಧವಾಗಿವೆ ಎಂಬುದನ್ನು ನಾವು ಮರೆಯಬಾರದು. ಆದ್ದರಿಂದ ಹಿಂಸಾಚಾರದ ಸಾಧ್ಯತೆಗಳು ತುಂಬಾ ಹೆಚ್ಚಿವೆ… ಇದು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಕೊನೆಗೊಳ್ಳಬಹುದು” ಎಂದು ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಕ್ರಿಸ್ಟೀನ್ ಸ್ಕ್ರಾನರ್ ಬರ್ಗೆನರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪೆರೋನಿಸಂ & ಮಿಲಿಟರಿ ಸರ್ವಾಧಿಕಾರ ಆಳುವ ವರ್ಗ ಮತ್ತು ಮಿಲಿಟರಿ

ಸಾಮಾಜಿಕ ಕಾರ್ಯಕರ್ತರು ಸೇನೆಯ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿದ್ದು, ಸೇನೆಗೆ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಫ್ಯೂ ಫ್ಯೂ ಥಾ, “ನಾವು ಹಲವು ವರ್ಷಗಳಿಂದ ಮಿಲಿಟರಿ ನಿಯಂತ್ರಣದಲ್ಲಿದ್ದೆವು, ಈ ಸಮಯದಲ್ಲಿ ನಾವು ಅವುಗಳನ್ನು ಮುಗಿಸಲೇಬೇಕು. ನಮಗೆ ನಿಜವಾದ ಪ್ರಜಾಪ್ರಭುತ್ವ ಬೇಕು. ನಮ್ಮ ದೇಶವನ್ನು ಆಳಲು ಮಿಲಿಟರಿಗೆ ನಾವು ಇನ್ನು ಮುಂದೆ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಟರ್ನೆಟ್ ತಡೆ ಮುಂದುವರಿಕೆಯ ನಡುವೆಯು ಹೋರಾಟಗಾರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆಗಳಿಗೆ ಕರೆ ನೀಡಿದ್ದಾರೆ.‌ “ನಾವು ಸಾಮೂಹಿಕವಾಗಿ ರ್‍ಯಾಲಿ ನಡೆಸೋಣ, ಯುವಕರ ಮತ್ತು ನಮ್ಮ ದೇಶದ ಭವಿಷ್ಯವನ್ನು ನಾಶಪಡಿಸಿದ ಮಿಲಿಟರಿ ಸರ್ಕಾರದ ವಿರುದ್ಧ ನಮ್ಮ ಬಲವನ್ನು ತೋರಿಸೋಣ” ಎಂದು ಬಂಧಿತ ನಾಯಕಿ ಆಂಗ್ ಸಾನ್ ಸೂಕಿ ಅವರ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ವಕ್ತಾರ ಕೈ ಟೋ ಮಂಗಳವಾರ ತಡರಾತ್ರಿ ತಮ್ಮ ಫೇಸ್‌ಬುಕ್‌ ಪೇಜ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...