Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾವು-ನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೆ ಪ್ರದೇಶದಲ್ಲಿ ಸಂಭವಿಸಿವೆ.

ಭೂಕಂಪ ಸಂಭವಿಸಿದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ. ಭೂಕಂಪದಿಂದ ಮ್ಯಾನ್ಮಾರ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ಸೇತುವೆ, ರಸ್ತೆಗಳಿಗೆ ಹಾನಿಯಾಗಿದೆ.

ಥಾಯ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಥೈಲ್ಯಾಂಡ್‌ ಮತ್ತು ಮ್ಯಾನ್ಮಾರ್ ಎರಡೂ ಕಡೆಯೂ ರಕ್ಷಣಾ ತಂಡಗಳು ಜನರನ್ನು ಅವಶೇಷಗಳ ಅಡಿಯಿಂದ ತೆಗೆಯಲು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.

“ನಗರದಾದ್ಯಂತ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಗಗನಚುಂಬಿ ಕಟ್ಟಡ ಕುಸಿತದಲ್ಲಿ ಬಲಿಯಾಗಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಚತುಚಕ್ ವಾರಾಂತ್ಯದ ಮಾರುಕಟ್ಟೆಯ ಬಳಿ ಈ ಬೃಹತ್ ಕಟ್ಟಡ ಕುಸಿತವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 100ಕ್ಕೂ ಹೆಚ್ಚು ಕಾರ್ಮಿಕರ ಸುಳಿವು ಇನ್ನೂ ಸಿಕ್ಕಿಲ್ಲ” ಎಂದು ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಭಾರತ ಶೋಧ ಮತ್ತು ರಕ್ಷಣಾ ತಂಡ, ವೈದ್ಯಕೀಯ ತಂಡ ಹಾಗೂ ಅಗತ್ಯ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ಕಳುಹಿಸಿದೆ. ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಮತ್ತು ಸಹಾಯ ಮಾಡಲು ಭಾನುವಾರ 50 ಜನರ ತಂಡವನ್ನು ಕಳುಹಿಸುವುದಾಗಿ ಮಲೇಷ್ಯಾ ತಿಳಿಸಿದೆ.
ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆಯು 5 ಮಿಲಿಯನ್ ಡಾಲರ್‌ಗಳ ನೆರವು ನಿಗದಿಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಟಾಸ್‌ನ ವರದಿಯ ಪ್ರಕಾರ, ರಷ್ಯಾದ ತುರ್ತು ಸಚಿವಾಲಯವು 120 ರಕ್ಷಣಾ ಕಾರ್ಯಕರ್ತರು ಮತ್ತು ಅಗತ್ಯ ಸಾಮಾಗ್ರಿಗಳನ್ನು ಹೊತ್ತ ಎರಡು ವಿಮಾನಗಳನ್ನು ಕಳುಹಿಸಿದೆ. ಚೀನಾ ಕೂಡ ಬದುಕುಳಿದವರಿಗೆ ಕಂಬಳಿ ಮತ್ತು ಆಹಾರವನ್ನು ಕಳುಹಿಸಿದೆ. ಜೊತೆಗೆ ಡ್ರೋನ್‌ಗಳು ಮತ್ತು ಇತರ ಉಪಕರಣಗಳೊಂದಿಗೆ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ ಎಂದು ಎನ್‌ವೈಟಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...