Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾವು-ನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೆ ಪ್ರದೇಶದಲ್ಲಿ ಸಂಭವಿಸಿವೆ.

ಭೂಕಂಪ ಸಂಭವಿಸಿದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ. ಭೂಕಂಪದಿಂದ ಮ್ಯಾನ್ಮಾರ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ಸೇತುವೆ, ರಸ್ತೆಗಳಿಗೆ ಹಾನಿಯಾಗಿದೆ.

ಥಾಯ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಥೈಲ್ಯಾಂಡ್‌ ಮತ್ತು ಮ್ಯಾನ್ಮಾರ್ ಎರಡೂ ಕಡೆಯೂ ರಕ್ಷಣಾ ತಂಡಗಳು ಜನರನ್ನು ಅವಶೇಷಗಳ ಅಡಿಯಿಂದ ತೆಗೆಯಲು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.

“ನಗರದಾದ್ಯಂತ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಗಗನಚುಂಬಿ ಕಟ್ಟಡ ಕುಸಿತದಲ್ಲಿ ಬಲಿಯಾಗಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಚತುಚಕ್ ವಾರಾಂತ್ಯದ ಮಾರುಕಟ್ಟೆಯ ಬಳಿ ಈ ಬೃಹತ್ ಕಟ್ಟಡ ಕುಸಿತವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 100ಕ್ಕೂ ಹೆಚ್ಚು ಕಾರ್ಮಿಕರ ಸುಳಿವು ಇನ್ನೂ ಸಿಕ್ಕಿಲ್ಲ” ಎಂದು ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಭಾರತ ಶೋಧ ಮತ್ತು ರಕ್ಷಣಾ ತಂಡ, ವೈದ್ಯಕೀಯ ತಂಡ ಹಾಗೂ ಅಗತ್ಯ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ಕಳುಹಿಸಿದೆ. ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಮತ್ತು ಸಹಾಯ ಮಾಡಲು ಭಾನುವಾರ 50 ಜನರ ತಂಡವನ್ನು ಕಳುಹಿಸುವುದಾಗಿ ಮಲೇಷ್ಯಾ ತಿಳಿಸಿದೆ.
ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆಯು 5 ಮಿಲಿಯನ್ ಡಾಲರ್‌ಗಳ ನೆರವು ನಿಗದಿಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಟಾಸ್‌ನ ವರದಿಯ ಪ್ರಕಾರ, ರಷ್ಯಾದ ತುರ್ತು ಸಚಿವಾಲಯವು 120 ರಕ್ಷಣಾ ಕಾರ್ಯಕರ್ತರು ಮತ್ತು ಅಗತ್ಯ ಸಾಮಾಗ್ರಿಗಳನ್ನು ಹೊತ್ತ ಎರಡು ವಿಮಾನಗಳನ್ನು ಕಳುಹಿಸಿದೆ. ಚೀನಾ ಕೂಡ ಬದುಕುಳಿದವರಿಗೆ ಕಂಬಳಿ ಮತ್ತು ಆಹಾರವನ್ನು ಕಳುಹಿಸಿದೆ. ಜೊತೆಗೆ ಡ್ರೋನ್‌ಗಳು ಮತ್ತು ಇತರ ಉಪಕರಣಗಳೊಂದಿಗೆ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ ಎಂದು ಎನ್‌ವೈಟಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...