Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...