Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...