Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...