Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...