Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...