Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...