Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...