Homeಕರ್ನಾಟಕಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

- Advertisement -
- Advertisement -

ಮೈಸೂರು ನಗರದ ಮಾತೃ ಮಂಡಲಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇರಿಸಲು ಅವಕಾಶ ನೀಡಲಿಲ್ಲ ಎಂದು ಯುವಕನೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ನಡೆದಿದೆ.

ಶನಿವಾರ ಮುಂಜಾನೆ 3 ಗಂಟೆಯ ವೇಳೆಯಲ್ಲಿ ಪ್ರತಿಮೆಯನ್ನು ಇರಿಸಲು ಯತ್ನಿಸಲಾಗಿದೆ. ಯಾವುದೇ ಅನುಮತಿ ಪಡೆದಿಲ್ಲವೆಂದು ಪಾಲಿಕೆ ಸಿಬ್ಬಂದಿ ಹಾಗೂ ವಿ.ವಿ.ಪುರಂ ಠಾಣೆ ಪೊಲೀಸರು ಪ್ರತಿಮೆಯನ್ನು ತೆರವು ಮಾಡಿಸಿದ್ದಾರೆ. ಈ ವೇಳೆ ಸತೀಶ್‌ (29) ಎಂಬ ಯುವಕ ಕತ್ತುಕೊಯ್ದುಕೊಂಡಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿ.ವಿ.ಪುರಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟೇಶ್‌, “ವಿವಾದಿತ ವೃತ್ತದಲ್ಲಿ ಪ್ರತಿಮೆ ಇರಿಸಲಾಗಿತ್ತು. ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಪಾಲಿಕೆಯವರು ಹಾಗೂ ಪೊಲೀಸರು ಜೊತೆಗೂಡಿ ಪ್ರತಿಮೆಯನ್ನು ತೆರವುಗೊಳಿಸಿ ಅಂಬೇಡ್ಕರ್‌ ಭವನದೊಳಗೆ ಇರಿಸಿದೆವು. ಈ ವೇಳೆ ಯುವಕನೊಬ್ಬ ಕತ್ತುಕೊಯ್ದುಕೊಂಡಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’


‘ಬೇರೆ ಸ್ಥಳಗಳಲ್ಲಿ ಅನಧಿಕೃತವಾಗಿ ಬೇರೆಯವರ ಪ್ರತಿಮೆಗಳನ್ನು ಇರಿಸಿದ್ದರೂ ಪಾಲಿಕೆ ಹಾಗೂ ಪೊಲೀಸರು ಕ್ರಮ ವಹಿಸುವುದಿಲ್ಲ. ದಲಿತರು ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಮಾತ್ರ ತೆರವು ಮಾಡಿಸುತ್ತಾರೆ’ ಎಂಬ ಆರೋಪಗಳಿವೆ ಎಂದು ಕೇಳಿದಾಗ, “ನಮ್ಮ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ರತಿಮೆಗಳಿಲ್ಲ. ಮತ್ತೊಂದು ವಿಷಯವೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಇರಿಸಿದರೆ, ಪೊಲೀಸರಿಗೆ ಎಂದಿಗೂ ಸಮಸ್ಯೆಯೇ. ಯಾಕೆಂದರೆ ಆ ಪ್ರತಿಮೆಗಳನ್ನು ಕಾಯ್ದುಕೊಳ್ಳಬೇಕು, ಅಲ್ಲಿ ಸಿಸಿ ಟಿವಿ ಅಳವಡಿಸಬೇಕು. ಯಾರಾದರೂ ಅವಿವೇಕಿ ಬಂದು ಮದ್ಯದ ಅಮಲಿನಲ್ಲಿ ಪ್ರತಿಮೆಗಳನ್ನು ವಿರೂಪಗೊಳಿಸಿದರೆ ಪೊಲೀಸರೇ ಹೊಣೆಗಾರರಾಗಬೇಕಾಗುತ್ತದೆ” ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

“ಶನಿವಾರ ಬೆಳಿಗ್ಗೆ ಅಂಬೇಡ್ಕರ್‌ ಭವನದಲ್ಲಿ ಸಭೆ ನಡೆಯಿತು. ಅನುಮತಿ ಪಡೆಯದೇ ಅಂಬೇಡ್ಕರ್‌ ಪ್ರತಿಮೆ ಇರಿಸಿದ್ದು ತಪ್ಪಾಗಿದೆ. ಅನುಮತಿ ಪಡೆದೇ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ದಲಿತ ಮುಖಂಡರು ತಿಳಿಸಿದ್ದಾರೆ” ಎಂದು ಇನ್‌ಸ್ಪೆಕ್ಟರ್‌ ತಿಳಿಸಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಾಜಿ ಮೇಯರ್‌‌ ಹಾಗೂ ದಲಿತ ಮುಖಂಡ ಪುರುಷೋತ್ತಮ್‌ ಅವರು, “ಅನಧಿಕೃತವಾಗಿ ಪ್ರತಿಮೆಗಳನ್ನು ಸ್ಥಾಪಿಸುವುದು ತಪ್ಪು. ನಗರದ ಅನೇಕ ಕಡೆ ವಿವಿಧ ದಾರ್ಶನಿಕರ ಪ್ರತಿಮೆಗಳನ್ನು ಇಡಲಾಗಿದೆ. ಅವುಗಳನ್ನು ಯಾರೂ ತೆರವು ಮಾಡಿಸಿಲ್ಲ. ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಕ್ರಮ ಜರುಗಿಸುತ್ತಾರೆ. ನಾವು ಯಾವ ದಾರ್ಶನಿಕರ ವಿರೋಧಿಗಳಲ್ಲ. ಆದರೆ ಬಾಬಾ ಸಾಹೇಬರ ಪ್ರತಿಮೆಯನ್ನು ವಿರೋಧಿಸುವುದು ಸಲ್ಲದು. ಮಾತೃಮಂಡಲಿ ಜಾಗದಲ್ಲಿ ಅಂಬೇಡ್ಕರ್‌‌ ಪ್ರತಿಮೆ ಇರಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಪಾಲಿಕೆಗೆ ಮತ್ತೊಮ್ಮೆ ಮನವಿ ಮಾಡಲಾಗುವುದು. ಈ ಸಂಬಂಧ ಮತ್ತೊಂದು ಸಭೆ ನಡೆಸಿ, ಪಾಲಿಕೆಯ ಮೇಲೆ ಒತ್ತಡ ತರಲಾಗುವುದು” ಎಂದು ತಿಳಿಸಿದರು.

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ. ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ ಎನ್ನುತ್ತವೆ ಮೂಲಗಳು.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದಾರೆ. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು- ವಾಸವಿದ್ದಾರೆ. ಆದರೆ ಪ್ರತಿಮೆ ವಿಚಾರವಾಗಿ ಒಡೆದುಹೋಗುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಅಂಬೇಡ್ಕರ್‌‌ ಮತ್ತು ಕುವೆಂಪು ಮಹಾನ್‌ ಮಾನವತಾವಾದಿಗಳು. ಆದರೆ ಈ ಮಹಾನೀಯರ ಹೆಸರಲ್ಲಿ ಜಗಳ ಆಡುವುದನ್ನು ಬಿಟ್ಟು- ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಶಾಂತಿಪ್ರಿಯ, ಸಂವಿಧಾನಪ್ರಿಯ ಸಮಾಜದ ಆಗ್ರಹ.


ಇದನ್ನೂ ಓದಿರಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...