Homeಕರ್ನಾಟಕಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

- Advertisement -
- Advertisement -

ಮೈಸೂರು ನಗರದ ಮಾತೃ ಮಂಡಲಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇರಿಸಲು ಅವಕಾಶ ನೀಡಲಿಲ್ಲ ಎಂದು ಯುವಕನೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ನಡೆದಿದೆ.

ಶನಿವಾರ ಮುಂಜಾನೆ 3 ಗಂಟೆಯ ವೇಳೆಯಲ್ಲಿ ಪ್ರತಿಮೆಯನ್ನು ಇರಿಸಲು ಯತ್ನಿಸಲಾಗಿದೆ. ಯಾವುದೇ ಅನುಮತಿ ಪಡೆದಿಲ್ಲವೆಂದು ಪಾಲಿಕೆ ಸಿಬ್ಬಂದಿ ಹಾಗೂ ವಿ.ವಿ.ಪುರಂ ಠಾಣೆ ಪೊಲೀಸರು ಪ್ರತಿಮೆಯನ್ನು ತೆರವು ಮಾಡಿಸಿದ್ದಾರೆ. ಈ ವೇಳೆ ಸತೀಶ್‌ (29) ಎಂಬ ಯುವಕ ಕತ್ತುಕೊಯ್ದುಕೊಂಡಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿ.ವಿ.ಪುರಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟೇಶ್‌, “ವಿವಾದಿತ ವೃತ್ತದಲ್ಲಿ ಪ್ರತಿಮೆ ಇರಿಸಲಾಗಿತ್ತು. ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಪಾಲಿಕೆಯವರು ಹಾಗೂ ಪೊಲೀಸರು ಜೊತೆಗೂಡಿ ಪ್ರತಿಮೆಯನ್ನು ತೆರವುಗೊಳಿಸಿ ಅಂಬೇಡ್ಕರ್‌ ಭವನದೊಳಗೆ ಇರಿಸಿದೆವು. ಈ ವೇಳೆ ಯುವಕನೊಬ್ಬ ಕತ್ತುಕೊಯ್ದುಕೊಂಡಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’


‘ಬೇರೆ ಸ್ಥಳಗಳಲ್ಲಿ ಅನಧಿಕೃತವಾಗಿ ಬೇರೆಯವರ ಪ್ರತಿಮೆಗಳನ್ನು ಇರಿಸಿದ್ದರೂ ಪಾಲಿಕೆ ಹಾಗೂ ಪೊಲೀಸರು ಕ್ರಮ ವಹಿಸುವುದಿಲ್ಲ. ದಲಿತರು ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಮಾತ್ರ ತೆರವು ಮಾಡಿಸುತ್ತಾರೆ’ ಎಂಬ ಆರೋಪಗಳಿವೆ ಎಂದು ಕೇಳಿದಾಗ, “ನಮ್ಮ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ರತಿಮೆಗಳಿಲ್ಲ. ಮತ್ತೊಂದು ವಿಷಯವೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಇರಿಸಿದರೆ, ಪೊಲೀಸರಿಗೆ ಎಂದಿಗೂ ಸಮಸ್ಯೆಯೇ. ಯಾಕೆಂದರೆ ಆ ಪ್ರತಿಮೆಗಳನ್ನು ಕಾಯ್ದುಕೊಳ್ಳಬೇಕು, ಅಲ್ಲಿ ಸಿಸಿ ಟಿವಿ ಅಳವಡಿಸಬೇಕು. ಯಾರಾದರೂ ಅವಿವೇಕಿ ಬಂದು ಮದ್ಯದ ಅಮಲಿನಲ್ಲಿ ಪ್ರತಿಮೆಗಳನ್ನು ವಿರೂಪಗೊಳಿಸಿದರೆ ಪೊಲೀಸರೇ ಹೊಣೆಗಾರರಾಗಬೇಕಾಗುತ್ತದೆ” ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

“ಶನಿವಾರ ಬೆಳಿಗ್ಗೆ ಅಂಬೇಡ್ಕರ್‌ ಭವನದಲ್ಲಿ ಸಭೆ ನಡೆಯಿತು. ಅನುಮತಿ ಪಡೆಯದೇ ಅಂಬೇಡ್ಕರ್‌ ಪ್ರತಿಮೆ ಇರಿಸಿದ್ದು ತಪ್ಪಾಗಿದೆ. ಅನುಮತಿ ಪಡೆದೇ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ದಲಿತ ಮುಖಂಡರು ತಿಳಿಸಿದ್ದಾರೆ” ಎಂದು ಇನ್‌ಸ್ಪೆಕ್ಟರ್‌ ತಿಳಿಸಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಾಜಿ ಮೇಯರ್‌‌ ಹಾಗೂ ದಲಿತ ಮುಖಂಡ ಪುರುಷೋತ್ತಮ್‌ ಅವರು, “ಅನಧಿಕೃತವಾಗಿ ಪ್ರತಿಮೆಗಳನ್ನು ಸ್ಥಾಪಿಸುವುದು ತಪ್ಪು. ನಗರದ ಅನೇಕ ಕಡೆ ವಿವಿಧ ದಾರ್ಶನಿಕರ ಪ್ರತಿಮೆಗಳನ್ನು ಇಡಲಾಗಿದೆ. ಅವುಗಳನ್ನು ಯಾರೂ ತೆರವು ಮಾಡಿಸಿಲ್ಲ. ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಕ್ರಮ ಜರುಗಿಸುತ್ತಾರೆ. ನಾವು ಯಾವ ದಾರ್ಶನಿಕರ ವಿರೋಧಿಗಳಲ್ಲ. ಆದರೆ ಬಾಬಾ ಸಾಹೇಬರ ಪ್ರತಿಮೆಯನ್ನು ವಿರೋಧಿಸುವುದು ಸಲ್ಲದು. ಮಾತೃಮಂಡಲಿ ಜಾಗದಲ್ಲಿ ಅಂಬೇಡ್ಕರ್‌‌ ಪ್ರತಿಮೆ ಇರಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಪಾಲಿಕೆಗೆ ಮತ್ತೊಮ್ಮೆ ಮನವಿ ಮಾಡಲಾಗುವುದು. ಈ ಸಂಬಂಧ ಮತ್ತೊಂದು ಸಭೆ ನಡೆಸಿ, ಪಾಲಿಕೆಯ ಮೇಲೆ ಒತ್ತಡ ತರಲಾಗುವುದು” ಎಂದು ತಿಳಿಸಿದರು.

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ. ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ ಎನ್ನುತ್ತವೆ ಮೂಲಗಳು.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದಾರೆ. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು- ವಾಸವಿದ್ದಾರೆ. ಆದರೆ ಪ್ರತಿಮೆ ವಿಚಾರವಾಗಿ ಒಡೆದುಹೋಗುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಅಂಬೇಡ್ಕರ್‌‌ ಮತ್ತು ಕುವೆಂಪು ಮಹಾನ್‌ ಮಾನವತಾವಾದಿಗಳು. ಆದರೆ ಈ ಮಹಾನೀಯರ ಹೆಸರಲ್ಲಿ ಜಗಳ ಆಡುವುದನ್ನು ಬಿಟ್ಟು- ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಶಾಂತಿಪ್ರಿಯ, ಸಂವಿಧಾನಪ್ರಿಯ ಸಮಾಜದ ಆಗ್ರಹ.


ಇದನ್ನೂ ಓದಿರಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...