Homeಮುಖಪುಟಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಈ ಕುರಿತು ಮಾಹಿತಿ ಕೇಳಿದ್ದಕ್ಕೆ ತಾನು RSS ಏನಿವಾಗ ಎಂದು ಅಸಾಂವಿಧಾನಿಕ ಭಾಷೆ ಬಳಸಿ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡ ರಂಗಾಯಣ ನಿರ್ದೇಶಕರು!

- Advertisement -
- Advertisement -

ಮೈಸೂರಿನ ರಂಗಾಯಣವು ಡಿಸೆಂಬರ್ 10 ರಿಂದ 19 ರವರೆಗೆ ನಡೆಸಲು ಉದ್ದೇಶಿಸಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಯ ಕಾರಣಕ್ಕಾಗಿ ಮುಂದೂಡಿದೆ.

ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿ 500ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿದೆ. ಆದರೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಪ್ರತಿದಿನ ಸಾವಿರಾರು ರಂಗಾಸಕ್ತರು ಭಾಗವಹಿಸುತ್ತಾರೆ. ಪ್ರತಿದಿನ ಪ್ರದರ್ಶನ ನೀಡುವ ಕಲಾವಿದರೇ 500ಕ್ಕಿಂತ ಹೆಚ್ಚು ಜನ ಭಾಗವಹಿಸುತ್ತಾರೆ. ಇವರನ್ನು ನಿರ್ಬಂಧಿಸಿ ಕಾರ್ಯಕ್ರಮ ನಡೆಸುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ. ಆದುದರಿಂದ ಈಗ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮುಂದೂಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ ಮೊದಲ ವಾರದಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ರಂಗಾಯಣ ಫೇಸ್‌ಬುಕ್ ಪುಟದಲ್ಲಿ ತಿಳಿಸಲಾಗಿದೆ.

ಈ ಕುರಿತು ಅಧಿಕೃತ ಮಾಹಿತಿ ಪಡೆಯಲು ನಾನುಗೌರಿ.ಕಾಂ ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪರವರನ್ನು ಸಂಪರ್ಕಿಸಿದಾಗ ಅವರು ಮಾಹಿತಿ ನೀಡಲು ನಿರಾಕರಿಸಿದ್ದಲ್ಲದೆ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡಿದ್ದು, ಅಸಾಂವಿಧಾನಿಕ ಪದಗಳನ್ನು ಬಳಸಿ ನಿರ್ದೇಶಕ ಹುದ್ದೆಗೆ ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ.

ನಾನು ನಿಮಗೆ ಯಾವುದೇ ಮಾಹಿತಿ ಕೊಡುವುದಿಲ್ಲ. ನೀವು ಅನಾವಶ್ಯಕವಾಗಿ ನನ್ನ ಫೋಟೊವನ್ನು ಪ್ರಕಟಿಸಿ ಅವಮಾನ, ಚಾರಿತ್ರ್ಯವಧೆ ಮಾಡಿದ್ದೀರಿ, ನಿಮ್ಮ ಸಿದ್ಧಾಂತಗಳು ನಿಮಗಾದರೆ, ಹೌದ್ರಿ ನಾನು ಆರ್‌ಎಸ್‌ಎಸ್‌, ಪ್ರಧಾನ ಮಂತ್ರಿ ಆರ್‌ಎಸ್‌ಎಸ್‌, ಕನ್ನಡ ಸಂಸ್ಕೃತಿ ಇಲಾಖೆಯ ಮಂತ್ರಿ ಆರ್‌ಎಸ್‌ಎಸ್‌ ಏನ್ ಇವಾಗ? ಎಂದು ಅಸಾಂವಿಧಾನಿಕ ಪದಗಳನ್ನು ಬಳಸಿ ಹೀಗಳೆದಿದ್ದಾರೆ. ನಂತರ ಫೋನ್ ನಂಬರ್ ಅನ್ನು ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಾರೆ.

ರಂಗಾಯಣದ ನಿರ್ದೇಶಕರೇಕೆ ಹೀಗೆ?

ಈ ಮೊದಲು ಡಿಸೆಂಬರ್ 10 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ನಡೆಸಲು ನಿರ್ಧರಿಸಿ ಸಮಾರೋಪ ಸಮಾರಂಭಕ್ಕೆ ವಿವಾದಾತ್ಮಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಆಹ್ವಾನ ನೀಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ “ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದು ಉತ್ತರಿಸಿದ್ದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ ಎಂದು ಉಡಾಫೆಯಿಂದ ಉತ್ತರಿಸಿದ್ದರು. ಇದನ್ನು ನಾನುಗೌರಿ ಯಥಾವತ್ ಪ್ರಕಟಸಿತ್ತು. ಆ ಸಿಟ್ಟಿನಲ್ಲಿ ಅವರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬೇಕಾಬಿಟ್ಟಿ ಮಾತಾನಾಡುತ್ತಿದ್ದಾರೆ.

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಆದರೆ ಇಂದು ರಂಗಾಯಣ ಬಿಡುಗಡೆ ಮಾಡಿರುವ ಪತ್ರಿಕಾಹೇಳಿಕೆಯಲ್ಲಿ “ಈಗ ತೀರ್ಮಾನಿಸಿರುವಂತೆ ಭಾಗವಹಿಸುವ ಎಲ್ಲಾ ನಾಟಕ ತಂಡಗಳು, ಜಾನಪದ ತಂಡಗಳು, ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳು, ಈ ಮೊದಲು ನಿಶ್ಚಿತವಾದ ಸಮಾರಂಭದ ಎಲ್ಲಾ ಅತಿಥಿಗಳು ಅವರೇ ಇರುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮ ಮುಂದೂಡಿರುವುದರಿಂದ ಆಗಿರುವ ತೊಂದರೆಗಳಿಗೆ ವಿಷಾದಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ; ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...