Homeಮುಖಪುಟಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಈ ಕುರಿತು ಮಾಹಿತಿ ಕೇಳಿದ್ದಕ್ಕೆ ತಾನು RSS ಏನಿವಾಗ ಎಂದು ಅಸಾಂವಿಧಾನಿಕ ಭಾಷೆ ಬಳಸಿ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡ ರಂಗಾಯಣ ನಿರ್ದೇಶಕರು!

- Advertisement -
- Advertisement -

ಮೈಸೂರಿನ ರಂಗಾಯಣವು ಡಿಸೆಂಬರ್ 10 ರಿಂದ 19 ರವರೆಗೆ ನಡೆಸಲು ಉದ್ದೇಶಿಸಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಯ ಕಾರಣಕ್ಕಾಗಿ ಮುಂದೂಡಿದೆ.

ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿ 500ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿದೆ. ಆದರೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಪ್ರತಿದಿನ ಸಾವಿರಾರು ರಂಗಾಸಕ್ತರು ಭಾಗವಹಿಸುತ್ತಾರೆ. ಪ್ರತಿದಿನ ಪ್ರದರ್ಶನ ನೀಡುವ ಕಲಾವಿದರೇ 500ಕ್ಕಿಂತ ಹೆಚ್ಚು ಜನ ಭಾಗವಹಿಸುತ್ತಾರೆ. ಇವರನ್ನು ನಿರ್ಬಂಧಿಸಿ ಕಾರ್ಯಕ್ರಮ ನಡೆಸುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ. ಆದುದರಿಂದ ಈಗ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮುಂದೂಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ ಮೊದಲ ವಾರದಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ರಂಗಾಯಣ ಫೇಸ್‌ಬುಕ್ ಪುಟದಲ್ಲಿ ತಿಳಿಸಲಾಗಿದೆ.

ಈ ಕುರಿತು ಅಧಿಕೃತ ಮಾಹಿತಿ ಪಡೆಯಲು ನಾನುಗೌರಿ.ಕಾಂ ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪರವರನ್ನು ಸಂಪರ್ಕಿಸಿದಾಗ ಅವರು ಮಾಹಿತಿ ನೀಡಲು ನಿರಾಕರಿಸಿದ್ದಲ್ಲದೆ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡಿದ್ದು, ಅಸಾಂವಿಧಾನಿಕ ಪದಗಳನ್ನು ಬಳಸಿ ನಿರ್ದೇಶಕ ಹುದ್ದೆಗೆ ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ.

ನಾನು ನಿಮಗೆ ಯಾವುದೇ ಮಾಹಿತಿ ಕೊಡುವುದಿಲ್ಲ. ನೀವು ಅನಾವಶ್ಯಕವಾಗಿ ನನ್ನ ಫೋಟೊವನ್ನು ಪ್ರಕಟಿಸಿ ಅವಮಾನ, ಚಾರಿತ್ರ್ಯವಧೆ ಮಾಡಿದ್ದೀರಿ, ನಿಮ್ಮ ಸಿದ್ಧಾಂತಗಳು ನಿಮಗಾದರೆ, ಹೌದ್ರಿ ನಾನು ಆರ್‌ಎಸ್‌ಎಸ್‌, ಪ್ರಧಾನ ಮಂತ್ರಿ ಆರ್‌ಎಸ್‌ಎಸ್‌, ಕನ್ನಡ ಸಂಸ್ಕೃತಿ ಇಲಾಖೆಯ ಮಂತ್ರಿ ಆರ್‌ಎಸ್‌ಎಸ್‌ ಏನ್ ಇವಾಗ? ಎಂದು ಅಸಾಂವಿಧಾನಿಕ ಪದಗಳನ್ನು ಬಳಸಿ ಹೀಗಳೆದಿದ್ದಾರೆ. ನಂತರ ಫೋನ್ ನಂಬರ್ ಅನ್ನು ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಾರೆ.

ರಂಗಾಯಣದ ನಿರ್ದೇಶಕರೇಕೆ ಹೀಗೆ?

ಈ ಮೊದಲು ಡಿಸೆಂಬರ್ 10 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ನಡೆಸಲು ನಿರ್ಧರಿಸಿ ಸಮಾರೋಪ ಸಮಾರಂಭಕ್ಕೆ ವಿವಾದಾತ್ಮಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಆಹ್ವಾನ ನೀಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ “ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದು ಉತ್ತರಿಸಿದ್ದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ ಎಂದು ಉಡಾಫೆಯಿಂದ ಉತ್ತರಿಸಿದ್ದರು. ಇದನ್ನು ನಾನುಗೌರಿ ಯಥಾವತ್ ಪ್ರಕಟಸಿತ್ತು. ಆ ಸಿಟ್ಟಿನಲ್ಲಿ ಅವರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬೇಕಾಬಿಟ್ಟಿ ಮಾತಾನಾಡುತ್ತಿದ್ದಾರೆ.

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಆದರೆ ಇಂದು ರಂಗಾಯಣ ಬಿಡುಗಡೆ ಮಾಡಿರುವ ಪತ್ರಿಕಾಹೇಳಿಕೆಯಲ್ಲಿ “ಈಗ ತೀರ್ಮಾನಿಸಿರುವಂತೆ ಭಾಗವಹಿಸುವ ಎಲ್ಲಾ ನಾಟಕ ತಂಡಗಳು, ಜಾನಪದ ತಂಡಗಳು, ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳು, ಈ ಮೊದಲು ನಿಶ್ಚಿತವಾದ ಸಮಾರಂಭದ ಎಲ್ಲಾ ಅತಿಥಿಗಳು ಅವರೇ ಇರುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮ ಮುಂದೂಡಿರುವುದರಿಂದ ಆಗಿರುವ ತೊಂದರೆಗಳಿಗೆ ವಿಷಾದಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ; ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...