Homeಮುಖಪುಟಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

ಈ ಕುರಿತು ಮಾಹಿತಿ ಕೇಳಿದ್ದಕ್ಕೆ ತಾನು RSS ಏನಿವಾಗ ಎಂದು ಅಸಾಂವಿಧಾನಿಕ ಭಾಷೆ ಬಳಸಿ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡ ರಂಗಾಯಣ ನಿರ್ದೇಶಕರು!

- Advertisement -
- Advertisement -

ಮೈಸೂರಿನ ರಂಗಾಯಣವು ಡಿಸೆಂಬರ್ 10 ರಿಂದ 19 ರವರೆಗೆ ನಡೆಸಲು ಉದ್ದೇಶಿಸಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಯ ಕಾರಣಕ್ಕಾಗಿ ಮುಂದೂಡಿದೆ.

ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜೊತೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿ 500ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿದೆ. ಆದರೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಪ್ರತಿದಿನ ಸಾವಿರಾರು ರಂಗಾಸಕ್ತರು ಭಾಗವಹಿಸುತ್ತಾರೆ. ಪ್ರತಿದಿನ ಪ್ರದರ್ಶನ ನೀಡುವ ಕಲಾವಿದರೇ 500ಕ್ಕಿಂತ ಹೆಚ್ಚು ಜನ ಭಾಗವಹಿಸುತ್ತಾರೆ. ಇವರನ್ನು ನಿರ್ಬಂಧಿಸಿ ಕಾರ್ಯಕ್ರಮ ನಡೆಸುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ. ಆದುದರಿಂದ ಈಗ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮುಂದೂಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ ಮೊದಲ ವಾರದಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ರಂಗಾಯಣ ಫೇಸ್‌ಬುಕ್ ಪುಟದಲ್ಲಿ ತಿಳಿಸಲಾಗಿದೆ.

ಈ ಕುರಿತು ಅಧಿಕೃತ ಮಾಹಿತಿ ಪಡೆಯಲು ನಾನುಗೌರಿ.ಕಾಂ ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪರವರನ್ನು ಸಂಪರ್ಕಿಸಿದಾಗ ಅವರು ಮಾಹಿತಿ ನೀಡಲು ನಿರಾಕರಿಸಿದ್ದಲ್ಲದೆ ಅತ್ಯಂತ ಉಡಾಫೆಯಿಂದ, ಉದ್ಧಟತನದಿಂದ ನಡೆದುಕೊಂಡಿದ್ದು, ಅಸಾಂವಿಧಾನಿಕ ಪದಗಳನ್ನು ಬಳಸಿ ನಿರ್ದೇಶಕ ಹುದ್ದೆಗೆ ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ.

ನಾನು ನಿಮಗೆ ಯಾವುದೇ ಮಾಹಿತಿ ಕೊಡುವುದಿಲ್ಲ. ನೀವು ಅನಾವಶ್ಯಕವಾಗಿ ನನ್ನ ಫೋಟೊವನ್ನು ಪ್ರಕಟಿಸಿ ಅವಮಾನ, ಚಾರಿತ್ರ್ಯವಧೆ ಮಾಡಿದ್ದೀರಿ, ನಿಮ್ಮ ಸಿದ್ಧಾಂತಗಳು ನಿಮಗಾದರೆ, ಹೌದ್ರಿ ನಾನು ಆರ್‌ಎಸ್‌ಎಸ್‌, ಪ್ರಧಾನ ಮಂತ್ರಿ ಆರ್‌ಎಸ್‌ಎಸ್‌, ಕನ್ನಡ ಸಂಸ್ಕೃತಿ ಇಲಾಖೆಯ ಮಂತ್ರಿ ಆರ್‌ಎಸ್‌ಎಸ್‌ ಏನ್ ಇವಾಗ? ಎಂದು ಅಸಾಂವಿಧಾನಿಕ ಪದಗಳನ್ನು ಬಳಸಿ ಹೀಗಳೆದಿದ್ದಾರೆ. ನಂತರ ಫೋನ್ ನಂಬರ್ ಅನ್ನು ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಾರೆ.

ರಂಗಾಯಣದ ನಿರ್ದೇಶಕರೇಕೆ ಹೀಗೆ?

ಈ ಮೊದಲು ಡಿಸೆಂಬರ್ 10 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ನಡೆಸಲು ನಿರ್ಧರಿಸಿ ಸಮಾರೋಪ ಸಮಾರಂಭಕ್ಕೆ ವಿವಾದಾತ್ಮಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಆಹ್ವಾನ ನೀಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ “ಚಕ್ರವರ್ತಿ ಸೂಲಿಬೆಲೆ ಅವರು ಹೇಳುವುದು ನಿಮಗೆ ಸುಳ್ಳಾಗಿರಬಹುದು, ಆದರೆ ನಮಗಲ್ಲ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದು ಉತ್ತರಿಸಿದ್ದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ ಎಂದು ಉಡಾಫೆಯಿಂದ ಉತ್ತರಿಸಿದ್ದರು. ಇದನ್ನು ನಾನುಗೌರಿ ಯಥಾವತ್ ಪ್ರಕಟಸಿತ್ತು. ಆ ಸಿಟ್ಟಿನಲ್ಲಿ ಅವರು ತಮ್ಮ ಹುದ್ದೆಯ ಘನತೆಯನ್ನು ಮರೆತು ಬೇಕಾಬಿಟ್ಟಿ ಮಾತಾನಾಡುತ್ತಿದ್ದಾರೆ.

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಆದರೆ ಇಂದು ರಂಗಾಯಣ ಬಿಡುಗಡೆ ಮಾಡಿರುವ ಪತ್ರಿಕಾಹೇಳಿಕೆಯಲ್ಲಿ “ಈಗ ತೀರ್ಮಾನಿಸಿರುವಂತೆ ಭಾಗವಹಿಸುವ ಎಲ್ಲಾ ನಾಟಕ ತಂಡಗಳು, ಜಾನಪದ ತಂಡಗಳು, ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳು, ಈ ಮೊದಲು ನಿಶ್ಚಿತವಾದ ಸಮಾರಂಭದ ಎಲ್ಲಾ ಅತಿಥಿಗಳು ಅವರೇ ಇರುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮ ಮುಂದೂಡಿರುವುದರಿಂದ ಆಗಿರುವ ತೊಂದರೆಗಳಿಗೆ ವಿಷಾದಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ; ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...