Homeಕರ್ನಾಟಕಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ

- Advertisement -
- Advertisement -

ಚಾಮುಂಡಿ ಬೆಟ್ಟದಲ್ಲಿ ಕಳೆದ ಎಂಟು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಮಹಿಷಾ ದಸರಾಗೆ ಜಿಲ್ಲಾಡಳಿತ ಅನುಮತಿ ನಿಕರಿಸಿದ ಹಿನ್ನಲೆ, ಮೈಸೂರಿನ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾನುವಾರ ಸಾಂಕೀತಿಕ ಮಹಿಷ ದಸರಾವನ್ನು ಆಚರಿಸಲಾಗಿದೆ.

ಜಿಲ್ಲಾಡಳಿತವು ಮಹಿಷಾ ದಸರಾಗೆ ಅನುಮತಿ ನಿರಾಕರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಇದರ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಷಾ ದಸರಾ ಆಯೋಜನಾ ಸಮಿತಿಯು ಕಳೆದ ಎಂಟು ವರ್ಷದಿಂದ ಮಹಿಷಾ ದಸರಾವನ್ನು ಆಚರಿಸುತ್ತಿದೆ. ಪೌರಾಣಿಕ ಕಥೆಗಳ ಪ್ರಕಾರ ರಾಕ್ಷಸನೆಂದು ಪರಿಗಣಿಸಲ್ಪಟ್ಟ ಮಹಿಷಾಸುರನನ್ನು ಚಾಮುಂಡೇಶ್ವರಿ ದೇವಿಯು ವಧೆ ಮಾಡುತ್ತಾಳೆ. ಆದರೆ ಮಹಿಷಾ ದಸರಾ ಆಯೋಜನಾ ಸಮಿತಿಯು ಮಹಿಷಾಸುರ ರಾಕ್ಷಸನಲ್ಲ, ಆತ ರಕ್ಷಕನಾಗಿದ್ದು, ಮಹಿಷಾ ಮಂಡಲದ ಶ್ರೇಷ್ಠ ದೊರೆ ಎಂದು ಪ್ರತಿಪಾದಿಸುತ್ತದೆ. ಹತ್ತು ದಿನಗಳ ಕಾಲ ನಡೆಯುವ ವಾರ್ಷಿಕ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಮಹಿಷ ದಸರಾವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ಮಹಿಷ ದಸರಾ ಆಯೋಜನಾ ಸಮಿತಿಯ ಮುಖ್ಯಸ್ಥರಾದ ಮಾಜಿ ಮೇಯರ್ ಪುರುಷೋತ್ತಮ್, ಉರಿಳಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಖ್ಯಾತ ಸಾಹಿತಿ ಕೆ.ಎಸ್. ಭಗವಾನ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ವಿ. ನಂಜರಾಜ್ ಅರಸ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಹಿಷ ದಸರಾವನ್ನು ಆಚರಿಸಲಾಗಿದೆ.

“ಮಹಿಷಾಸುರ ದಯಾಪರ ಆಡಳಿತಗಾರನಾಗಿದ್ದು, ಮಾನವತಾವಾದಿಯಾಗಿದ್ದನು” ಎಂದು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಮ್ಮ ಇಚ್ಛೆಯ ದೇವರನ್ನು ಪೂಜಿಸುವ ಸಾಂವಿಧಾನಿಕ ಹಕ್ಕಿನಿಂದ ನಾವು ವಂಚಿತರಾಗಿದ್ದೇವೆ ಎಂದು ಅವರು ವಿಷಾದಿಸಿದ್ದಾರೆ.

ಮಹಿಷನ ಪ್ರತಿಮೆಗೆ ಬ್ಯಾರಿಕೇಡ್ ಹಾಕಲಾಗಿದ್ದು, ಸಂಪೂರ್ಣವಾಗಿ ಬಟ್ಟೆಯಿಂದ ಮುಚ್ಚಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ಒಳಗೆ ಬಿಡುವ ಮುನ್ನ ತಪಾಸಣೆ ನಡೆಸಲಾಗುತ್ತಿದೆ (ಚಿತ್ರಕೃಪೆ: ಸಿಟಿ ಟುಡೆ)

ಮಹಿಷಾ ದಸರಾ ಸಮಾರಂಭದಲ್ಲಿ ಮಾತನಾಡಿದ ಪ್ರೊ.ನಂಜರಾಜ್ ಅರಸ್, “ಮಹಿಷ ದಸರಾಗೆ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದೆ. ಗಣೇಶ ಪೆಂಡಾಲ್‌‌ಗಳಲ್ಲಿ ಪೂಜಿಸಲ್ಪಟ್ಟ ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆಯವರ ಭಾವಚಿತ್ರಗಳನ್ನು ಮೆರವಣಿಗೆ ಮಾಡಲಾಗಿದೆ. ಅವರಿಗಿಂತ ಮಹಿಷ ಕೆಟ್ಟವನಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ಮಹಿಷನಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ವಾದಿಸಿದ ಪ್ರೊ. ಅರಸ್‌, “ಜಯಚಾಮಜೇಂದ್ರ ಒಡೆಯರ್ ಸೇರಿದಂತೆ ಮೈಸೂರಿನ ಹಿಂದಿನ ದೊರೆಗಳ ಲೆಟರ್‌ಹೆಡ್‌ಗಳ ಪ್ರತಿಗಳು ತಮ್ಮ ಬಳಿ ಇವೆ. ಮುಂದಿನ ವರ್ಷ ನೂತನ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಷ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತಾಗಲಿ. ಯಾರೂ ಅಧಿಕಾರಕ್ಕೆ ಬರಲಿ. ಬಿಜೆಪಿ ಅಧಿಕಾರಕ್ಕೆ ಬರಬಾರದು” ಎಂದು ಅವರು ಹೇಳಿದ್ದಾರೆ.

ಮಹಿಷಾಸುರನ ಬಗ್ಗೆ ಮತ್ತಷ್ಟು ಓದಿಗೆ:

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ
‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌
ವರ್ತಮಾನದಲ್ಲಿ ಪುರಾಣಗಳನ್ನು ಶೋಧಿಸಿ ಮರುಕಟ್ಟುವ ಅಗತ್ಯ
ಬಲಿಯ ಆದರ್ಶ ರಾಜ್ಯ ಮತ್ತು ಅದನ್ನು ಕಸಿದುಕೊಂಡು ಕಟ್ಟಿದ ಪುರಾಣದ ಬಗ್ಗೆ ಜ್ಯೋತಿಬಾ ಫುಲೆ ಬರಹ

ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಹೇಳಿದ ಪೌರಾಣಿಕ ಪಾತ್ರಗಳು ಮಾತ್ರ ದೇವರು. ಇಲ್ಲೂ ವಂಚನೆ ಇವರು ಹೇಳಿದ ದೇವರಿಗೆ ಮಾತ್ರ ಪೂಜೆ ಸಲ್ಲಿಸಬೇಕು! ಅಂಬೇಡ್ಕರ್ ವಾದಿ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ರಾಜ್ಯದಾದ್ಯಂತ ಮಹಿಶ ದಸರಾ ನಡೆಯುವಂತೆ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...