Homeಕರ್ನಾಟಕಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೊ | ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಅಮಾನತು

ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೊ | ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಅಮಾನತು

- Advertisement -
- Advertisement -

ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಒಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಿಂದನಾತ್ಮಕ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿರುವ ಘಟನೆ ನಡೆದಿದ್ದು, ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಸಿಎಂ ವಿರುದ್ಧ ಅವಹೇಳನಕಾರಿ

ಮಾಜಿ ಸೇನಾಧಿಕಾರಿಯೂ ಆಗಿರುವ 45 ವರ್ಷದ ವಾರ್ಡರ್ (ಪೊಲೀಸ್ ಕಾನ್‌ಸ್ಟೆಬಲ್ ಶ್ರೇಣಿ) ಎಚ್.ಎನ್. ಮಧು ಕುಮಾರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 5.33 ನಿಮಿಷಗಳ ಈ ವಿಡಿಯೋದಲ್ಲಿ, ಸಿಎಂ ಅವರನ್ನು ಗುರಿಯಾಗಿಸಿಕೊಂಡು ನಿಂದಿಸಲಾಗಿದೆ.

ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮಣಿ ಅವರ ವಿರುದ್ಧ ಸಿದ್ದರಾಮಯ್ಯ ಅವರ ಕೋಪಗೊಂಡು ಕೈ ಎತ್ತಿದ್ದರು. ಇದನ್ನು ಖಂಡಿಸಿ ವಾರ್ಡರ್‌ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದಾರೆ.

ಮಧು ಕುಮಾರ್ ಕಳೆದ ನಾಲ್ಕು ವರ್ಷಗಳಿಂದ ಕಾರಾಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ ಎಸ್ ರಮೇಶ್ ಪ್ರಾಥಮಿಕ ತನಿಖೆ ನಡೆಸಿ ಸೋಮವಾರ ಅವರನ್ನು ಅಮಾನತುಗೊಳಿಸಿದ್ದಾರೆ. “ವಾರ್ಡರ್ ಏಪ್ರಿಲ್ 28 ರಂದು ವಿಡಿಯೋ ಮಾಡಿದ್ದಾರೆ. ಆದರೆ, ಇದು ಸೋಮವಾರ ಸಂಜೆ ನಮ್ಮ ಗಮನಕ್ಕೆ ಬಂದಿದೆ. ಅವರ ವಿರುದ್ಧ ವಿವರವಾದ ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದ್ದಾರೆ.

ಕಾನ್‌ಸ್ಟೆಬಲ್ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಮಂಗಳವಾರ ಮೈಸೂರು ಕೇಂದ್ರ ಕಾರಾಗೃಹದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಡಿಯೋದಲ್ಲಿ, ಮಧು ಕುಮಾರ್, “ಪೊಲೀಸರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದರೆ, ರಾಜಕಾರಣಿಗಳು ಕೇವಲ ಐದು ವರ್ಷಗಳ ಕಾಲ ಜನರ ಭಿಕ್ಷೆಯಿಂದ ಆಯ್ಕೆಯಾಗುತ್ತಾರೆ” ಎಂದು ಹೇಳಿದ್ದಾರೆ. ಎಲ್‌ಎಲ್‌ಬಿ ಮುಗಿಸಿ, ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು, ಜಿಲ್ಲೆಗೆ ಮುಖ್ಯಸ್ಥರಾಗಿರುವ ಎಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಅಧಿಕಾರಿಯೊಂದಿಗೆ ಹೇಗೆ ವರ್ತಿಸಬೇಕೆಂದು ಅವರಿಗೆ ತಿಳಿದಿರಬೇಕಿತ್ತು ಎಂದು ಹೇಳಿದ್ದಾರೆ.

ಕರ್ನಾಟಕ ಪೊಲೀಸರು ಅವರ ಗುಲಾಮರಲ್ಲ. ಎಎಸ್‌ಪಿಯ ಪರಿಸ್ಥಿತಿ ಹೀಗಿದ್ದರೆ, ಕಾನ್‌ಸ್ಟೆಬಲ್‌ಗೆ ಏನಾಗುತ್ತಿತ್ತು? ಈ ನಡವಳಿಕೆಯಿಂದ, ಅವರು ಅವರ ಬಗ್ಗೆ ನನಗಿದ್ದ ಗೌರವವನ್ನು ಕಳೆದುಕೊಂಡಿದ್ದಾರೆ ಎಂದು ಮಧುಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಹಿರಿಯ ಮಗ ರಾಕೇಶ್ ಸಾವಿನ ಬಗ್ಗೆ ಮತ್ತು ಸಿಎಂ ಪತ್ನಿಗೆ ಮುಡಾ ಪರ್ಯಾಯ ಪರಿಹಾರ ನಿವೇಶನಗಳ ಹಂಚಿಕೆಯ ಬಗ್ಗೆಯೂ ಅವರು ವಿಡಿಯೊದಲ್ಲಿ ಪ್ರತಿಕ್ರಿಯಿಸಿದ್ದಾರೆ. “ಮೈಸೂರು ಕೇಂದ್ರ ಕಾರಾಗೃಹದ ಸಿಬ್ಬಂದಿಗೆ ಸಂಬಳ ಜಮಾ ಮಾಡುವಲ್ಲಿ ವಿಳಂಬ ಏಕೆ ಆಗುತ್ತಿದೆ ಮತ್ತು ಬ್ಯಾಂಕ್ ಸಾಲಗಳಿಗೆ ಇಎಂಐ ಪಾವತಿ ಮಾಡುವುದು ಹೇಗೆ” ಎಂದು ಅವರು ಕೇಳಿದ್ದಾರೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಗುಂಪು ದಾಳಿ ಮತ್ತು ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಅವರು, “ತಮ್ಮ ಜಿಲ್ಲೆಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗದ ಅವರಿಗೆ ರಾಜ್ಯದ ಜನರು ಏನನ್ನು ನಿರೀಕ್ಷಿಸಲು ಸಾಧ್ಯ” ಎಂದು ಅವರು ವಿಡಿಯೋದಲ್ಲಿ ಕೇಳಿದ್ದಾರೆ.

ಮಧು ಕುಮಾರ್ ತಮ್ಮ ಕೆಲಸವನ್ನು ಕಳೆದುಕೊಳ್ಳಲು ಸಿದ್ಧರಿರುವುದಾಗಿ ವಿಡಿಯೊದಲ್ಲಿ ಹೇಳಿದ್ದು, ವಿಡಿಯೋವನ್ನು ಮುಖ್ಯಮಂತ್ರಿಗೆ ತಲುಪುವವರೆಗೆ ಅದನ್ನು ಶೇರ್‌ ಮಾಡುವಂತೆ ಜನರನ್ನು ಕೇಳಿಕೊಂಡಿದ್ದರು.

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021, ನಿಯಮ 11 (i) ಮತ್ತು (ii) ಉಲ್ಲಂಘನೆಗಾಗಿ ಮಧು ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಸುತ್ತೋಲೆಯ ಪ್ರಕಾರ, ಸರ್ಕಾರಿ ಉದ್ಯೋಗಿಯೊಬ್ಬರು ಸರ್ಕಾರಿ ನೀತಿಯ ವಿರುದ್ಧ ಅಥವಾ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಅಥವಾ ಅಭಿಪ್ರಾಯವನ್ನು ಪ್ರಸಾರ ಮಾಡಬಾರದು.

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮಧು ಕುಮಾರ್ ವಿರುದ್ಧ ಮೈಸೂರು ನಗರ ಪೊಲೀಸರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರಿಗೆ ದೂರು ನೀಡಿದ್ದಾರೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಕಟಿಸಿ | ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಕಟಿಸಿ | ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...