Homeಕರ್ನಾಟಕಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೊ | ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಅಮಾನತು

ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೊ | ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಅಮಾನತು

- Advertisement -
- Advertisement -

ಮೈಸೂರು ಕೇಂದ್ರ ಕಾರಾಗೃಹದ ವಾರ್ಡರ್ ಒಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಿಂದನಾತ್ಮಕ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿರುವ ಘಟನೆ ನಡೆದಿದ್ದು, ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಸಿಎಂ ವಿರುದ್ಧ ಅವಹೇಳನಕಾರಿ

ಮಾಜಿ ಸೇನಾಧಿಕಾರಿಯೂ ಆಗಿರುವ 45 ವರ್ಷದ ವಾರ್ಡರ್ (ಪೊಲೀಸ್ ಕಾನ್‌ಸ್ಟೆಬಲ್ ಶ್ರೇಣಿ) ಎಚ್.ಎನ್. ಮಧು ಕುಮಾರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 5.33 ನಿಮಿಷಗಳ ಈ ವಿಡಿಯೋದಲ್ಲಿ, ಸಿಎಂ ಅವರನ್ನು ಗುರಿಯಾಗಿಸಿಕೊಂಡು ನಿಂದಿಸಲಾಗಿದೆ.

ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮಣಿ ಅವರ ವಿರುದ್ಧ ಸಿದ್ದರಾಮಯ್ಯ ಅವರ ಕೋಪಗೊಂಡು ಕೈ ಎತ್ತಿದ್ದರು. ಇದನ್ನು ಖಂಡಿಸಿ ವಾರ್ಡರ್‌ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದಾರೆ.

ಮಧು ಕುಮಾರ್ ಕಳೆದ ನಾಲ್ಕು ವರ್ಷಗಳಿಂದ ಕಾರಾಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ ಎಸ್ ರಮೇಶ್ ಪ್ರಾಥಮಿಕ ತನಿಖೆ ನಡೆಸಿ ಸೋಮವಾರ ಅವರನ್ನು ಅಮಾನತುಗೊಳಿಸಿದ್ದಾರೆ. “ವಾರ್ಡರ್ ಏಪ್ರಿಲ್ 28 ರಂದು ವಿಡಿಯೋ ಮಾಡಿದ್ದಾರೆ. ಆದರೆ, ಇದು ಸೋಮವಾರ ಸಂಜೆ ನಮ್ಮ ಗಮನಕ್ಕೆ ಬಂದಿದೆ. ಅವರ ವಿರುದ್ಧ ವಿವರವಾದ ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದ್ದಾರೆ.

ಕಾನ್‌ಸ್ಟೆಬಲ್ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಮಂಗಳವಾರ ಮೈಸೂರು ಕೇಂದ್ರ ಕಾರಾಗೃಹದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಡಿಯೋದಲ್ಲಿ, ಮಧು ಕುಮಾರ್, “ಪೊಲೀಸರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದರೆ, ರಾಜಕಾರಣಿಗಳು ಕೇವಲ ಐದು ವರ್ಷಗಳ ಕಾಲ ಜನರ ಭಿಕ್ಷೆಯಿಂದ ಆಯ್ಕೆಯಾಗುತ್ತಾರೆ” ಎಂದು ಹೇಳಿದ್ದಾರೆ. ಎಲ್‌ಎಲ್‌ಬಿ ಮುಗಿಸಿ, ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು, ಜಿಲ್ಲೆಗೆ ಮುಖ್ಯಸ್ಥರಾಗಿರುವ ಎಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಅಧಿಕಾರಿಯೊಂದಿಗೆ ಹೇಗೆ ವರ್ತಿಸಬೇಕೆಂದು ಅವರಿಗೆ ತಿಳಿದಿರಬೇಕಿತ್ತು ಎಂದು ಹೇಳಿದ್ದಾರೆ.

ಕರ್ನಾಟಕ ಪೊಲೀಸರು ಅವರ ಗುಲಾಮರಲ್ಲ. ಎಎಸ್‌ಪಿಯ ಪರಿಸ್ಥಿತಿ ಹೀಗಿದ್ದರೆ, ಕಾನ್‌ಸ್ಟೆಬಲ್‌ಗೆ ಏನಾಗುತ್ತಿತ್ತು? ಈ ನಡವಳಿಕೆಯಿಂದ, ಅವರು ಅವರ ಬಗ್ಗೆ ನನಗಿದ್ದ ಗೌರವವನ್ನು ಕಳೆದುಕೊಂಡಿದ್ದಾರೆ ಎಂದು ಮಧುಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಹಿರಿಯ ಮಗ ರಾಕೇಶ್ ಸಾವಿನ ಬಗ್ಗೆ ಮತ್ತು ಸಿಎಂ ಪತ್ನಿಗೆ ಮುಡಾ ಪರ್ಯಾಯ ಪರಿಹಾರ ನಿವೇಶನಗಳ ಹಂಚಿಕೆಯ ಬಗ್ಗೆಯೂ ಅವರು ವಿಡಿಯೊದಲ್ಲಿ ಪ್ರತಿಕ್ರಿಯಿಸಿದ್ದಾರೆ. “ಮೈಸೂರು ಕೇಂದ್ರ ಕಾರಾಗೃಹದ ಸಿಬ್ಬಂದಿಗೆ ಸಂಬಳ ಜಮಾ ಮಾಡುವಲ್ಲಿ ವಿಳಂಬ ಏಕೆ ಆಗುತ್ತಿದೆ ಮತ್ತು ಬ್ಯಾಂಕ್ ಸಾಲಗಳಿಗೆ ಇಎಂಐ ಪಾವತಿ ಮಾಡುವುದು ಹೇಗೆ” ಎಂದು ಅವರು ಕೇಳಿದ್ದಾರೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಗುಂಪು ದಾಳಿ ಮತ್ತು ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಅವರು, “ತಮ್ಮ ಜಿಲ್ಲೆಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗದ ಅವರಿಗೆ ರಾಜ್ಯದ ಜನರು ಏನನ್ನು ನಿರೀಕ್ಷಿಸಲು ಸಾಧ್ಯ” ಎಂದು ಅವರು ವಿಡಿಯೋದಲ್ಲಿ ಕೇಳಿದ್ದಾರೆ.

ಮಧು ಕುಮಾರ್ ತಮ್ಮ ಕೆಲಸವನ್ನು ಕಳೆದುಕೊಳ್ಳಲು ಸಿದ್ಧರಿರುವುದಾಗಿ ವಿಡಿಯೊದಲ್ಲಿ ಹೇಳಿದ್ದು, ವಿಡಿಯೋವನ್ನು ಮುಖ್ಯಮಂತ್ರಿಗೆ ತಲುಪುವವರೆಗೆ ಅದನ್ನು ಶೇರ್‌ ಮಾಡುವಂತೆ ಜನರನ್ನು ಕೇಳಿಕೊಂಡಿದ್ದರು.

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021, ನಿಯಮ 11 (i) ಮತ್ತು (ii) ಉಲ್ಲಂಘನೆಗಾಗಿ ಮಧು ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಸುತ್ತೋಲೆಯ ಪ್ರಕಾರ, ಸರ್ಕಾರಿ ಉದ್ಯೋಗಿಯೊಬ್ಬರು ಸರ್ಕಾರಿ ನೀತಿಯ ವಿರುದ್ಧ ಅಥವಾ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಅಥವಾ ಅಭಿಪ್ರಾಯವನ್ನು ಪ್ರಸಾರ ಮಾಡಬಾರದು.

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮಧು ಕುಮಾರ್ ವಿರುದ್ಧ ಮೈಸೂರು ನಗರ ಪೊಲೀಸರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರಿಗೆ ದೂರು ನೀಡಿದ್ದಾರೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಕಟಿಸಿ | ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಕಟಿಸಿ | ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...