HomeUncategorizedಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ದಂಡಾಧಿಕಾರಿಗಳು, ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ಪ್ರತಿ ‘ನಾನುಗೌರಿ.ಕಾಮ್‌‘ಗೆ ಲಭ್ಯವಾಗಿದ್ದು, “ಮೈಸೂರು ಜಿಲ್ಲೆ ಪೊಲೀಸ್ ಅಧೀಕ್ಷಕರ ಕೋರಿಕೆಯ ಮೇರೆಗೆ, ದಿನಾಂಕ: 06.12.2025 ರಿಂದ 07.12.2025 ರವರೆಗೆ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಪರ ಮತ್ತು ವಿರೋಧ ಪ್ರತಿಭಟನಾ ಸಮಾವೇಶಗಳು ನಡೆಯುವ ಸಂಭವಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಈ ಕೆಳಕಂಡ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಿ ಮೈಸೂರು ಜಿಲ್ಲೆಯ, ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163 ರೀತ್ಯಾ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಿರುತ್ತೇನೆ” ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ, ಈ ಅವಧಿಯಲ್ಲಿ, “ಯಾವುದೇ ಮೆರವಣಿಗೆ, ಪ್ರತಿಭಟನೆ, ಯಾವುದೇ ರೀತಿಯ ರ‍್ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಐದು ಜನರಿಗಿಂತ ಹೆಚ್ಚು ಜನ ಸೇರುವುದು, ಸಭೆ-ಸಮಾರಂಭಗಳನ್ನು ನಡೆಸುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು. ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ಧ್ವನಿವರ್ಧಕ ಬಳಸುವುದು, ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು. ಯಾವುದೇ ಗುಪ್ತ ಹಾಗೂ ಒಳಾಂಗಣ ಸಭೆ ನಡೆಸುವಂತಿಲ್ಲ” ಎಂದು ಆದೇಶ ಮಾಡಲಾಗಿದೆ.

“ಈ ಆದೇಶವನ್ನು ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ ಮತ್ತು ತಾಲ್ಲೂಕು ದಂಡಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಆದೇಶ ನೀಡಿದ್ದಾರೆ.

ಸರ್ಕಾರದ ನಡೆ ಖಂಡಿಸಿದ ಹೋರಾಟಗಾರರು:

    ನ್ಯಾಯ ಕೇಳಲು ಶಾಂತಿಯುತವಾಗಿ ಪಾದಯಾತ್ರೆ ನಡೆಸುವವರನ್ನು ಬಂಧಿಸಿದ ಸರ್ಕಾರದ ನಡೆಯನ್ನು ಹೋರಾಟಗಾರರು ಖಂಡಿಸಿದ್ದಾರೆ. ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ಮತ್ತು ಹಲವು ದಲಿತ ಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸುವ ಮೂಲಕ ಹತ್ತಿಕ್ಕಿದ್ದಾರೆ.

    ಇಂದು ಬೆಳಗ್ಗೆ ಬಂಧಿಸಿದ ಹೋರಾಟಗಾರರನ್ನು ಪೊಲೀಸರು ಈವರೆಗೆ ಬಿಡುಗಡೆ ಮಾಡಿಲ್ಲ. ಆದರೂ ನಾಳೆಯಿಂದ ಪಾದಯಾತ್ರೆ ಮುಂದುವರಿಯಲಿದೆ ಎಂದು ಹೋರಾಗಾರರು ‘ನಾನುಗೌರಿ.ಕಾಮ್‌‘ಗೆ ತಿಳಿಸಿದ್ದಾರೆ.

    ಬಂಧನ ಬಳಿಕ ನಾನುಗೌರಿ.ಕಾಮ್‌ ಮಾತನಾಡಿದ ಒಳಮೀಸಲಾತಿ ಹಿರಿಯ ಹೋರಾಟಗಾರ ಎಸ್‌.ಮಾರೆಪ್ಪ, “ದುರುದ್ದೇಶದಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿ ಈಗ ನಮ್ಮನ್ನು ಬಂಧಿಸಿದ್ದಾರೆ. ನಮ್ಮ ಸಮುದಾಯದ ಜನರ ಸಮಸ್ಯೆ ಕುರಿತು ಚರ್ಚಿಸಲು ನಮ್ಮದೇ ಸಮುದಾಯದ ನಾಯಕರ ಬಳಿಗೆ ಹೋಗುತ್ತಿರುವಾಗ ಬಂಧಿಸಿರುವುದು ಮೊದಲು. ಈಗ ನಾವು ಯಾರನ್ನು ಕೇಳಬೇಕು? ಈ ರೀತಿ ನಡೆದಿರುವುದು ಕರ್ನಾಟಕದ ಚರಿತ್ರಿಯಲ್ಲೇ ಮೊದಲು. ಸಿದ್ದರಾಮಯ್ಯ ಅವರ ಸರ್ಕಾರ ಹೀಗೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದು ಆಕ್ರೋಶ ಹೊರಹಾಕಿದರು.

    “ಒಳಮೀಸಲಾತಿ ಪ್ರಕ್ರಿಯೆ ಜಾರಿಗೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅವರ ಈ ವಿಳಂಬ ಧೋರಣೆಗೆ ಪೂರಕವಾಗಿ ಪೊಲೀಸರು ಕೂಡ ಕೆಲಸ ಮಾಡುತ್ತಿದ್ದು, ನಮ್ಮನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಒಳಮೀಸಲಾತಿ ಹೋರಾಟಗಾರರು ಸಿದ್ದರಾಮನಹುಂಡಿಗೆ ನೇರವಾಗಿ ತೆರಳಿ ಪಾದಯಾತ್ರೆ ಆರಂಭಿಸಬೇಕು. ರಾಜ್ಯದ ಜನರು, ಸರ್ಕಾರ ಮತ್ತು ಪೊಲೀಸರ ಈ ನಡೆಯನ್ನು ಖಂಡಿಸಬೇಕು” ಎಂದು ಒಳಮೀಸಲಾತಿ ಹೋರಾಟಗಾರ ಶಿವರಾಜ್ ಅಕ್ಕರಕಿ ಹೇಳಿದರು.

    “ಮಾನ್ಯ ಮುಖ್ಯಮಂತ್ರಿಗಳೆ.. ಸಚಿವರಾದ ಎಚ್‌.ಸಿ. ಮಹದೇವಪ್ಪ ಅವರೇ.. ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದವರು ನಾವು; ಕೋಮುವಾದಿಗಳನ್ನು ಸೋಲಿಸಿದ್ದು ನಾವು. ರಾಜ್ಯದಲ್ಲಿ ಶಾಂತಿ-ನೆಮ್ಮದಿ ಇರಬೇಕು ಎಂದು ಬಯಸಿದವರು. ನ್ಯಾಯಯುತವಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಹತ್ತಿಕ್ಕಿ, ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಇಡೀ ಆಡಳಿತ ಯಂತ್ರದಲ್ಲಿ ಮೀಸಲಾತಿ ಉದ್ದೇಶವನ್ನೇ ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ. ನಮ್ಮ ಹೋರಾಟ ಸರ್ಕಾರ ಅಥವಾ ಸಿದ್ದರಾಮಯ್ಯನವರ ವಿರುದ್ಧ ಅಲ್ಲ. ಏಕೆಂದರೆ, ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದು ಬಯಸಿದವರು ನಾವು. ನಮ್ಮದು ಶಾಂತಿಯುತ ಪಾದಯಾತ್ರೆ. ಆದರೆ, ನಮ್ಮನ್ನು ಪೊಲೀಸರು ಬಂಧಿಸಿ ಕರೆದೊಯ್ಯತ್ತಿದ್ದಾರೆ. ಬೇಕಿದ್ದರೆ ನಮ್ಮನ್ನು ಬಂಧಿಸಿ ಜೈಲಿನಲ್ಲಿಡಿ ಅದಕ್ಕಾಗಿ ನಾವು ತಯಾರಿದ್ದೇವೆ. ಆದರೆ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗಬೇಕು” ಎಂದು ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿ ಬೇಸರ ಆಗ್ರಹಿಸಿದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

    ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

    ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

    "ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

    ‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

    ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

    ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

    ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

    ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

    ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

    ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

    ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

    ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

    ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

    “ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

    ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

    ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

    ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

    ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...