Homeಕರ್ನಾಟಕಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

ಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

- Advertisement -
- Advertisement -

ಜಯಪುರ: ದಲಿತರಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ 11 ವರ್ಷಗಳಿಂದ ಬೀಗ ಹಾಕಿದ್ದ, ಮೈಸೂರು ತಾಲ್ಲೂಕಿನ ಮಾರ್ಬಳ್ಳಿಯಲ್ಲಿ ಶುಕ್ರವಾರ ಮತ್ತೆ ಮಾರಮ್ಮ ದೇವಾಲಯದ ಬಾಗಿಲನ್ನು ಅಧಿಕಾರಿಗಳ ಮಧ್ಯೆಪ್ರವೇಶದಿಂದ ಬಾಗಿಲನ್ನು ತೆರೆಯಲಾಗಿದೆ.

ಊರಿನ ದಲಿತರು ದೇವಾಲಯವನ್ನು ಪ್ರವೇಶ ಮಾಡಿದರೆಂದು, ಮಾರ್ಬಳ್ಳಿಯ ವಾಲ್ಮೀಕಿ ನಾಯಕ ಜನಾಂಗದವರು ವಿರೋಧ ವ್ಯಕ್ತಪಡಿಸಿ, ದೇಗುಲಕ್ಕೆ ಬೀಗ ಹಾಕಲಾಗಿತ್ತು. ‌ಈ ಸಂಬಂಧ ಸರಕಾರಿ ಅಧಿಕಾರಿಗಳು ಎರಡು ಸಮುದಾಯದವರ ಮಧ್ಯೆ ಮಾತುಕತೆ ನಡೆಸಿದ ನಂತರ ಈ ದೇಗುಲದ ಬಾಗಿಲನ್ನು ತೆರೆಯಲಾಗಿದೆ.

ಈಚೆಗೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಭೆ ನಡೆಸಲಾಗಿತ್ತು. ಇದು ಈಗ ಯಶಸ್ಸು ಕಂಡಿದೆ.

‘ಭಾರತೀಯ ಪ್ರಜೆಯಾದ ಯಾರಿಗೂ ಯಾವುದೇ ದೇವಾಲಯವನ್ನು ಪ್ರವೇಶಿಸುವ ಹಕ್ಕು ಇದೆ. ಎಲ್ಲರೂ  ಗ್ರಾಮದಲ್ಲಿ ಅನ್ಯೋನ್ಯತೆಯಿಂದ ಶಾಂತಿಯಿಂದ ಇರಬೇಕು. ಎಲ್ಲಾ ಜಾತಿ ಜನಾಂಗದವರಿಗೂ ದೇಗುಲಕ್ಕೆ ಮುಕ್ತ ಪ್ರವೇಶ ಮಾಡಿಕೊಡಬೇಕೆಂದು ಈ ಸಭೆಯಲ್ಲಿ ಸೂಚಿಸಲಾಗಿತ್ತು. ಇದಕ್ಕೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದ್ದರು.

ಗ್ರಾಮ ಪಂಚಾಯಿತಿಯಲ್ಲಿ ತಹಶೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಗಿತ್ತು. ಇದಾದ ನಂತರ ದೇಗುಲದ ಬೀಗ ತೆಗೆದು ಎರಡು ಸಮುದಾಯಗಳ ಜನರಿಗೆ  ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೀರ್ಘ ಕಾಲದ ನಂತರ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎ.ಎನ್.ಜನಾರ್ಧನ್, ಜಯಪುರ ನಾಡ ಕಚೇರಿ ಉಪತಹಶೀಲ್ದಾರ್ ಕೆ.ಎಸ್ ಕುಬೇರ್, ಕಂದಾಯ ಅಧಿಕಾರಿ ಸಿ.ವಿ.ಲೋಹಿತ್, ಗ್ರಾಮ ಲೆಕ್ಕಿಗ ಭಾಸ್ಕರ್, ಪಿಎಸ್ಐ ಹೇಮಲತಾ, ದಲಿತ ಮುಖಂಡರಾದ ಪರಮೇಶ್, ಕುಮಾರ್ ಹಾಗೂ ವಾಲ್ಮೀಕಿ ನಾಯಕ ಸಮುದಾಯ ಮುಖಂಡರಾದ ಶಿವಣ್ಣ ನಾಯಕ, ರಾಜಶೇಖರ ಮೂರ್ತಿ, ರಾಜ ನಾಯಕ, ರಾಜಣ್ಣ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...