Homeಕರ್ನಾಟಕಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

ಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

- Advertisement -
- Advertisement -

ಜಯಪುರ: ದಲಿತರಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ 11 ವರ್ಷಗಳಿಂದ ಬೀಗ ಹಾಕಿದ್ದ, ಮೈಸೂರು ತಾಲ್ಲೂಕಿನ ಮಾರ್ಬಳ್ಳಿಯಲ್ಲಿ ಶುಕ್ರವಾರ ಮತ್ತೆ ಮಾರಮ್ಮ ದೇವಾಲಯದ ಬಾಗಿಲನ್ನು ಅಧಿಕಾರಿಗಳ ಮಧ್ಯೆಪ್ರವೇಶದಿಂದ ಬಾಗಿಲನ್ನು ತೆರೆಯಲಾಗಿದೆ.

ಊರಿನ ದಲಿತರು ದೇವಾಲಯವನ್ನು ಪ್ರವೇಶ ಮಾಡಿದರೆಂದು, ಮಾರ್ಬಳ್ಳಿಯ ವಾಲ್ಮೀಕಿ ನಾಯಕ ಜನಾಂಗದವರು ವಿರೋಧ ವ್ಯಕ್ತಪಡಿಸಿ, ದೇಗುಲಕ್ಕೆ ಬೀಗ ಹಾಕಲಾಗಿತ್ತು. ‌ಈ ಸಂಬಂಧ ಸರಕಾರಿ ಅಧಿಕಾರಿಗಳು ಎರಡು ಸಮುದಾಯದವರ ಮಧ್ಯೆ ಮಾತುಕತೆ ನಡೆಸಿದ ನಂತರ ಈ ದೇಗುಲದ ಬಾಗಿಲನ್ನು ತೆರೆಯಲಾಗಿದೆ.

ಈಚೆಗೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಭೆ ನಡೆಸಲಾಗಿತ್ತು. ಇದು ಈಗ ಯಶಸ್ಸು ಕಂಡಿದೆ.

‘ಭಾರತೀಯ ಪ್ರಜೆಯಾದ ಯಾರಿಗೂ ಯಾವುದೇ ದೇವಾಲಯವನ್ನು ಪ್ರವೇಶಿಸುವ ಹಕ್ಕು ಇದೆ. ಎಲ್ಲರೂ  ಗ್ರಾಮದಲ್ಲಿ ಅನ್ಯೋನ್ಯತೆಯಿಂದ ಶಾಂತಿಯಿಂದ ಇರಬೇಕು. ಎಲ್ಲಾ ಜಾತಿ ಜನಾಂಗದವರಿಗೂ ದೇಗುಲಕ್ಕೆ ಮುಕ್ತ ಪ್ರವೇಶ ಮಾಡಿಕೊಡಬೇಕೆಂದು ಈ ಸಭೆಯಲ್ಲಿ ಸೂಚಿಸಲಾಗಿತ್ತು. ಇದಕ್ಕೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದ್ದರು.

ಗ್ರಾಮ ಪಂಚಾಯಿತಿಯಲ್ಲಿ ತಹಶೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಗಿತ್ತು. ಇದಾದ ನಂತರ ದೇಗುಲದ ಬೀಗ ತೆಗೆದು ಎರಡು ಸಮುದಾಯಗಳ ಜನರಿಗೆ  ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೀರ್ಘ ಕಾಲದ ನಂತರ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎ.ಎನ್.ಜನಾರ್ಧನ್, ಜಯಪುರ ನಾಡ ಕಚೇರಿ ಉಪತಹಶೀಲ್ದಾರ್ ಕೆ.ಎಸ್ ಕುಬೇರ್, ಕಂದಾಯ ಅಧಿಕಾರಿ ಸಿ.ವಿ.ಲೋಹಿತ್, ಗ್ರಾಮ ಲೆಕ್ಕಿಗ ಭಾಸ್ಕರ್, ಪಿಎಸ್ಐ ಹೇಮಲತಾ, ದಲಿತ ಮುಖಂಡರಾದ ಪರಮೇಶ್, ಕುಮಾರ್ ಹಾಗೂ ವಾಲ್ಮೀಕಿ ನಾಯಕ ಸಮುದಾಯ ಮುಖಂಡರಾದ ಶಿವಣ್ಣ ನಾಯಕ, ರಾಜಶೇಖರ ಮೂರ್ತಿ, ರಾಜ ನಾಯಕ, ರಾಜಣ್ಣ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...