Homeಕರ್ನಾಟಕಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಬೇಕಂತಲೇ ಆರ್‌ಎಸ್‌ಎಸ್‌ ಕುರಿತು ಚರ್ಚೆ ಇಟ್ಟಿದ್ದೇವೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉದ್ಧಟತನ!

- Advertisement -
- Advertisement -

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ಆಹ್ವಾನಿಸಿ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಮತ್ತೊಂದು ವಿವಾದಕ್ಕೆ ಆಹ್ವಾನ ನೀಡಿದ್ದಾರೆ.

“ಜೂ. 12ರಿಂದ ಆರಂಭವಾಗಲಿರುವ ಗ್ರೀಷ್ಮ ರಂಗಾಯಣೋತ್ಸವದಲ್ಲಿ ಬೇಕಂತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚರ್ಚೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕೋತ್ಸವದ ಕುರಿತು ಮಾಹಿತಿ ನೀಡಲು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. “ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತಾದ ಚರ್ಚೆ ಅಗತ್ಯವಿತ್ತೇ? ರಂಗಾಯಣಕ್ಕೂ ಸಂಘ ಪರಿವಾರಕ್ಕೂ ಏನು ಸಂಬಂಧ?” ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಪ್ರಸ್ತುತ ರಾಜ್ಯದಲ್ಲಿ ಸಂಘ ಪರಿವಾರದ ಕುರಿತು ಚರ್ಚೆಯಾಗುತ್ತಿದೆ. ಅದರ ಬಗ್ಗೆ ತಿಳಿಯಲೆಂದು ವಿಚಾರ ಪ್ರಸ್ತಾಪ ಮಾಡಿದ್ದೇವೆ” ಎಂದು ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.

“ವಿವಾದ ಬೆಳೆಸಲೆಂದು ಈ ವಿಚಾರವನ್ನು ತರಲಾಗಿದೆಯೇ?” ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾದವಿಲ್ಲದೇ ಏನಾದರೂ ಸಾಧ್ಯವಾಗುತ್ತದೆಯೇ? 32 ವರ್ಷಗಳಿಂದ ರಂಗಾಯಣದಲ್ಲಿ ಏನು ಚರ್ಚೆ ನಡೆದಿದೆ ನಿಮಗೂ ಗೊತ್ತಿದೆ. ಆರ್‌ಎಸ್‌ಎಸ್‌ ಕುರಿತು ಚರ್ಚೆಯಾದರೇ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ ಪ್ರಾಂತೀಯ ಸರ ಸಂಚಾಲಕರಾದ ಮಾ.ವೆಂಕಟರಾಮ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಾನೇಕೆ ಆರ್‌ಎಸ್‌ಎಸ್‌ನಲ್ಲಿ ಇದ್ದೇನೆ ಎಂಬ ವಿಷಯದ ಕುರಿತು ಮಾತಾಡಲಿದ್ದಾರೆ. ಸಂವಾದದ ವೇಳೆ ಅವರಿಗೆ ಪ್ರಶ್ನೆ ಕೇಳಬಹುದು. ಚರ್ಚೆಯಾದರೇ ತಪ್ಪೇನು? ರಂಗಾಯಣದಲ್ಲಿ ಒಂದೇ ವಿಚಾರ ಚರ್ಚೆಯಾಗಬೇಕೆ?” ಎಂದೂ ಪ್ರತಿಕ್ರಿಯಿಸಿದ್ದಾರೆ.

ಏನಿದು ಗ್ರೀಷ್ಮ ರಂಗೋತ್ಸವ?

“ರಂಗಾಯಣ ಮೈಸೂರು ತನ್ನ ಚಟುವಟಿಕೆಯನ್ನು ನಿರಂತರಗೊಳಿಸಲು ಸದಾ ಪ್ರಯತ್ನಿಸುತ್ತಿರುತ್ತದೆ. ಮಳೆಗಾಲ ಸಮೀಪಿಸುತ್ತಿದ್ದಂತೆ ಗ್ರೀಷ್ಮ ಋತುವಿನಲ್ಲಿ ರಂಗಾಯಣದಲ್ಲಿ ಈಗಾಗಲೇ ಸಿದ್ಧಪಡಿಸಿ ಪ್ರದರ್ಶನಗೊಂಡಿರುವ ನಾಟಕಗಳ ಹಬ್ಬ ಆಚರಿಸಲು ರ್ನಿರಿಸಲಾಗಿದೆ. ಅದೇ ಗ್ರೀಷ್ಮ ರಂಗಾಯಣೋತ್ಸವ” ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

‘ಭಾರತೀಯ ರಂಗವಿದ್ಯಾಲಯ’ದ 2021-22ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆದಿದ್ದು, ಒಂದು ವರ್ಷದ ರಂಗಶಿಕ್ಷಣ ಡಿಪ್ಲೊಮಾ ಮುಗಿದಿದೆ. ಎರಡು ಚಾತುರ್ಮಾಸಗಳಲ್ಲಿ ಸಿದ್ಧಪಡಿಸಲಾಗದ ನಾಲ್ಕು ನಾಟಕಗಳಾದ- ‘ಪ್ರಮೀಳಾರ್ಜುನೀಯಂ’, ‘ವಾಸಾಂಸಿ ಜೀರ್ಣಾನಿ’, ‘ಬೆಕ್ಕು ಬಾವಿ’, ‘ವಿದಿಶಾ ಪ್ರಹಸನ’- ಪ್ರದರ್ಶನ ಆಯೋಜಿಸಲಾಗಿದೆ. ಇದರ ಜೊತೆಗೆ ಕಿರಿಯ ರೆಪರ್ಟರಿ ಕಲಾವಿದರಿಂದ- ‘ಕೃಷ್ಣೇಗೌಡನ ಆನೆ’, ‘ಮೂಕನ ಮಕ್ಕಳ’ ನಾಟಕಗಳನ್ನು, ಸಂವಿಧಾನದ ಆಶಯ ತಂಡದಿಂದ- ‘ಸೂತ್ರದಾರ’, ಹಿರಿಯ ರೆಪರ್ಟರಿ ಕಲಾವಿದರಿಂದ ‘ಮಿಸ್ಟರ್ ಬೋಗೀಸ್‌’ ನಾಟಕ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್‌ 12ರಿಂದ 19ರವರೆಗೆ ‘ಗ್ರೀಷ್ಮ ರಂಗಾಯಣೋತ್ಸವ’ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಭೂಮಿಗೀತದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ಸಂಜೆ 4ರಿಂದ 5ರವರೆಗೆ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಕಲಾವಿದರೊಂದಿಗೆ ಸಂವಾದ ಆಯೋಜಿಸಲಾಗಿದೆ. ಜೂನ್‌ 17ರಂದು ಆರ್‌ಎಸ್‌ಎಸ್‌ ಕುರಿತು ಚರ್ಚೆಯನ್ನು ಬೇಕಂತಲೇ ಆಯೋಜಿಸಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...