Homeಕರ್ನಾಟಕಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಬೇಕಂತಲೇ ಆರ್‌ಎಸ್‌ಎಸ್‌ ಕುರಿತು ಚರ್ಚೆ ಇಟ್ಟಿದ್ದೇವೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉದ್ಧಟತನ!

- Advertisement -
- Advertisement -

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ಆಹ್ವಾನಿಸಿ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಮತ್ತೊಂದು ವಿವಾದಕ್ಕೆ ಆಹ್ವಾನ ನೀಡಿದ್ದಾರೆ.

“ಜೂ. 12ರಿಂದ ಆರಂಭವಾಗಲಿರುವ ಗ್ರೀಷ್ಮ ರಂಗಾಯಣೋತ್ಸವದಲ್ಲಿ ಬೇಕಂತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚರ್ಚೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕೋತ್ಸವದ ಕುರಿತು ಮಾಹಿತಿ ನೀಡಲು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. “ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತಾದ ಚರ್ಚೆ ಅಗತ್ಯವಿತ್ತೇ? ರಂಗಾಯಣಕ್ಕೂ ಸಂಘ ಪರಿವಾರಕ್ಕೂ ಏನು ಸಂಬಂಧ?” ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಪ್ರಸ್ತುತ ರಾಜ್ಯದಲ್ಲಿ ಸಂಘ ಪರಿವಾರದ ಕುರಿತು ಚರ್ಚೆಯಾಗುತ್ತಿದೆ. ಅದರ ಬಗ್ಗೆ ತಿಳಿಯಲೆಂದು ವಿಚಾರ ಪ್ರಸ್ತಾಪ ಮಾಡಿದ್ದೇವೆ” ಎಂದು ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.

“ವಿವಾದ ಬೆಳೆಸಲೆಂದು ಈ ವಿಚಾರವನ್ನು ತರಲಾಗಿದೆಯೇ?” ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾದವಿಲ್ಲದೇ ಏನಾದರೂ ಸಾಧ್ಯವಾಗುತ್ತದೆಯೇ? 32 ವರ್ಷಗಳಿಂದ ರಂಗಾಯಣದಲ್ಲಿ ಏನು ಚರ್ಚೆ ನಡೆದಿದೆ ನಿಮಗೂ ಗೊತ್ತಿದೆ. ಆರ್‌ಎಸ್‌ಎಸ್‌ ಕುರಿತು ಚರ್ಚೆಯಾದರೇ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ ಪ್ರಾಂತೀಯ ಸರ ಸಂಚಾಲಕರಾದ ಮಾ.ವೆಂಕಟರಾಮ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಾನೇಕೆ ಆರ್‌ಎಸ್‌ಎಸ್‌ನಲ್ಲಿ ಇದ್ದೇನೆ ಎಂಬ ವಿಷಯದ ಕುರಿತು ಮಾತಾಡಲಿದ್ದಾರೆ. ಸಂವಾದದ ವೇಳೆ ಅವರಿಗೆ ಪ್ರಶ್ನೆ ಕೇಳಬಹುದು. ಚರ್ಚೆಯಾದರೇ ತಪ್ಪೇನು? ರಂಗಾಯಣದಲ್ಲಿ ಒಂದೇ ವಿಚಾರ ಚರ್ಚೆಯಾಗಬೇಕೆ?” ಎಂದೂ ಪ್ರತಿಕ್ರಿಯಿಸಿದ್ದಾರೆ.

ಏನಿದು ಗ್ರೀಷ್ಮ ರಂಗೋತ್ಸವ?

“ರಂಗಾಯಣ ಮೈಸೂರು ತನ್ನ ಚಟುವಟಿಕೆಯನ್ನು ನಿರಂತರಗೊಳಿಸಲು ಸದಾ ಪ್ರಯತ್ನಿಸುತ್ತಿರುತ್ತದೆ. ಮಳೆಗಾಲ ಸಮೀಪಿಸುತ್ತಿದ್ದಂತೆ ಗ್ರೀಷ್ಮ ಋತುವಿನಲ್ಲಿ ರಂಗಾಯಣದಲ್ಲಿ ಈಗಾಗಲೇ ಸಿದ್ಧಪಡಿಸಿ ಪ್ರದರ್ಶನಗೊಂಡಿರುವ ನಾಟಕಗಳ ಹಬ್ಬ ಆಚರಿಸಲು ರ್ನಿರಿಸಲಾಗಿದೆ. ಅದೇ ಗ್ರೀಷ್ಮ ರಂಗಾಯಣೋತ್ಸವ” ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

‘ಭಾರತೀಯ ರಂಗವಿದ್ಯಾಲಯ’ದ 2021-22ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆದಿದ್ದು, ಒಂದು ವರ್ಷದ ರಂಗಶಿಕ್ಷಣ ಡಿಪ್ಲೊಮಾ ಮುಗಿದಿದೆ. ಎರಡು ಚಾತುರ್ಮಾಸಗಳಲ್ಲಿ ಸಿದ್ಧಪಡಿಸಲಾಗದ ನಾಲ್ಕು ನಾಟಕಗಳಾದ- ‘ಪ್ರಮೀಳಾರ್ಜುನೀಯಂ’, ‘ವಾಸಾಂಸಿ ಜೀರ್ಣಾನಿ’, ‘ಬೆಕ್ಕು ಬಾವಿ’, ‘ವಿದಿಶಾ ಪ್ರಹಸನ’- ಪ್ರದರ್ಶನ ಆಯೋಜಿಸಲಾಗಿದೆ. ಇದರ ಜೊತೆಗೆ ಕಿರಿಯ ರೆಪರ್ಟರಿ ಕಲಾವಿದರಿಂದ- ‘ಕೃಷ್ಣೇಗೌಡನ ಆನೆ’, ‘ಮೂಕನ ಮಕ್ಕಳ’ ನಾಟಕಗಳನ್ನು, ಸಂವಿಧಾನದ ಆಶಯ ತಂಡದಿಂದ- ‘ಸೂತ್ರದಾರ’, ಹಿರಿಯ ರೆಪರ್ಟರಿ ಕಲಾವಿದರಿಂದ ‘ಮಿಸ್ಟರ್ ಬೋಗೀಸ್‌’ ನಾಟಕ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್‌ 12ರಿಂದ 19ರವರೆಗೆ ‘ಗ್ರೀಷ್ಮ ರಂಗಾಯಣೋತ್ಸವ’ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಭೂಮಿಗೀತದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ಸಂಜೆ 4ರಿಂದ 5ರವರೆಗೆ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಕಲಾವಿದರೊಂದಿಗೆ ಸಂವಾದ ಆಯೋಜಿಸಲಾಗಿದೆ. ಜೂನ್‌ 17ರಂದು ಆರ್‌ಎಸ್‌ಎಸ್‌ ಕುರಿತು ಚರ್ಚೆಯನ್ನು ಬೇಕಂತಲೇ ಆಯೋಜಿಸಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...