Homeಕರ್ನಾಟಕಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಬೇಕಂತಲೇ ಆರ್‌ಎಸ್‌ಎಸ್‌ ಕುರಿತು ಚರ್ಚೆ ಇಟ್ಟಿದ್ದೇವೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉದ್ಧಟತನ!

- Advertisement -
- Advertisement -

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ಆಹ್ವಾನಿಸಿ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಮತ್ತೊಂದು ವಿವಾದಕ್ಕೆ ಆಹ್ವಾನ ನೀಡಿದ್ದಾರೆ.

“ಜೂ. 12ರಿಂದ ಆರಂಭವಾಗಲಿರುವ ಗ್ರೀಷ್ಮ ರಂಗಾಯಣೋತ್ಸವದಲ್ಲಿ ಬೇಕಂತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚರ್ಚೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕೋತ್ಸವದ ಕುರಿತು ಮಾಹಿತಿ ನೀಡಲು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. “ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತಾದ ಚರ್ಚೆ ಅಗತ್ಯವಿತ್ತೇ? ರಂಗಾಯಣಕ್ಕೂ ಸಂಘ ಪರಿವಾರಕ್ಕೂ ಏನು ಸಂಬಂಧ?” ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಪ್ರಸ್ತುತ ರಾಜ್ಯದಲ್ಲಿ ಸಂಘ ಪರಿವಾರದ ಕುರಿತು ಚರ್ಚೆಯಾಗುತ್ತಿದೆ. ಅದರ ಬಗ್ಗೆ ತಿಳಿಯಲೆಂದು ವಿಚಾರ ಪ್ರಸ್ತಾಪ ಮಾಡಿದ್ದೇವೆ” ಎಂದು ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.

“ವಿವಾದ ಬೆಳೆಸಲೆಂದು ಈ ವಿಚಾರವನ್ನು ತರಲಾಗಿದೆಯೇ?” ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾದವಿಲ್ಲದೇ ಏನಾದರೂ ಸಾಧ್ಯವಾಗುತ್ತದೆಯೇ? 32 ವರ್ಷಗಳಿಂದ ರಂಗಾಯಣದಲ್ಲಿ ಏನು ಚರ್ಚೆ ನಡೆದಿದೆ ನಿಮಗೂ ಗೊತ್ತಿದೆ. ಆರ್‌ಎಸ್‌ಎಸ್‌ ಕುರಿತು ಚರ್ಚೆಯಾದರೇ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ ಪ್ರಾಂತೀಯ ಸರ ಸಂಚಾಲಕರಾದ ಮಾ.ವೆಂಕಟರಾಮ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಾನೇಕೆ ಆರ್‌ಎಸ್‌ಎಸ್‌ನಲ್ಲಿ ಇದ್ದೇನೆ ಎಂಬ ವಿಷಯದ ಕುರಿತು ಮಾತಾಡಲಿದ್ದಾರೆ. ಸಂವಾದದ ವೇಳೆ ಅವರಿಗೆ ಪ್ರಶ್ನೆ ಕೇಳಬಹುದು. ಚರ್ಚೆಯಾದರೇ ತಪ್ಪೇನು? ರಂಗಾಯಣದಲ್ಲಿ ಒಂದೇ ವಿಚಾರ ಚರ್ಚೆಯಾಗಬೇಕೆ?” ಎಂದೂ ಪ್ರತಿಕ್ರಿಯಿಸಿದ್ದಾರೆ.

ಏನಿದು ಗ್ರೀಷ್ಮ ರಂಗೋತ್ಸವ?

“ರಂಗಾಯಣ ಮೈಸೂರು ತನ್ನ ಚಟುವಟಿಕೆಯನ್ನು ನಿರಂತರಗೊಳಿಸಲು ಸದಾ ಪ್ರಯತ್ನಿಸುತ್ತಿರುತ್ತದೆ. ಮಳೆಗಾಲ ಸಮೀಪಿಸುತ್ತಿದ್ದಂತೆ ಗ್ರೀಷ್ಮ ಋತುವಿನಲ್ಲಿ ರಂಗಾಯಣದಲ್ಲಿ ಈಗಾಗಲೇ ಸಿದ್ಧಪಡಿಸಿ ಪ್ರದರ್ಶನಗೊಂಡಿರುವ ನಾಟಕಗಳ ಹಬ್ಬ ಆಚರಿಸಲು ರ್ನಿರಿಸಲಾಗಿದೆ. ಅದೇ ಗ್ರೀಷ್ಮ ರಂಗಾಯಣೋತ್ಸವ” ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

‘ಭಾರತೀಯ ರಂಗವಿದ್ಯಾಲಯ’ದ 2021-22ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆದಿದ್ದು, ಒಂದು ವರ್ಷದ ರಂಗಶಿಕ್ಷಣ ಡಿಪ್ಲೊಮಾ ಮುಗಿದಿದೆ. ಎರಡು ಚಾತುರ್ಮಾಸಗಳಲ್ಲಿ ಸಿದ್ಧಪಡಿಸಲಾಗದ ನಾಲ್ಕು ನಾಟಕಗಳಾದ- ‘ಪ್ರಮೀಳಾರ್ಜುನೀಯಂ’, ‘ವಾಸಾಂಸಿ ಜೀರ್ಣಾನಿ’, ‘ಬೆಕ್ಕು ಬಾವಿ’, ‘ವಿದಿಶಾ ಪ್ರಹಸನ’- ಪ್ರದರ್ಶನ ಆಯೋಜಿಸಲಾಗಿದೆ. ಇದರ ಜೊತೆಗೆ ಕಿರಿಯ ರೆಪರ್ಟರಿ ಕಲಾವಿದರಿಂದ- ‘ಕೃಷ್ಣೇಗೌಡನ ಆನೆ’, ‘ಮೂಕನ ಮಕ್ಕಳ’ ನಾಟಕಗಳನ್ನು, ಸಂವಿಧಾನದ ಆಶಯ ತಂಡದಿಂದ- ‘ಸೂತ್ರದಾರ’, ಹಿರಿಯ ರೆಪರ್ಟರಿ ಕಲಾವಿದರಿಂದ ‘ಮಿಸ್ಟರ್ ಬೋಗೀಸ್‌’ ನಾಟಕ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್‌ 12ರಿಂದ 19ರವರೆಗೆ ‘ಗ್ರೀಷ್ಮ ರಂಗಾಯಣೋತ್ಸವ’ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಭೂಮಿಗೀತದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ಸಂಜೆ 4ರಿಂದ 5ರವರೆಗೆ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಕಲಾವಿದರೊಂದಿಗೆ ಸಂವಾದ ಆಯೋಜಿಸಲಾಗಿದೆ. ಜೂನ್‌ 17ರಂದು ಆರ್‌ಎಸ್‌ಎಸ್‌ ಕುರಿತು ಚರ್ಚೆಯನ್ನು ಬೇಕಂತಲೇ ಆಯೋಜಿಸಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...