Homeಕರ್ನಾಟಕಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಬೇಕಂತಲೇ ಆರ್‌ಎಸ್‌ಎಸ್‌ ಕುರಿತು ಚರ್ಚೆ ಇಟ್ಟಿದ್ದೇವೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉದ್ಧಟತನ!

- Advertisement -
- Advertisement -

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ಆಹ್ವಾನಿಸಿ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಮತ್ತೊಂದು ವಿವಾದಕ್ಕೆ ಆಹ್ವಾನ ನೀಡಿದ್ದಾರೆ.

“ಜೂ. 12ರಿಂದ ಆರಂಭವಾಗಲಿರುವ ಗ್ರೀಷ್ಮ ರಂಗಾಯಣೋತ್ಸವದಲ್ಲಿ ಬೇಕಂತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚರ್ಚೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕೋತ್ಸವದ ಕುರಿತು ಮಾಹಿತಿ ನೀಡಲು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. “ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತಾದ ಚರ್ಚೆ ಅಗತ್ಯವಿತ್ತೇ? ರಂಗಾಯಣಕ್ಕೂ ಸಂಘ ಪರಿವಾರಕ್ಕೂ ಏನು ಸಂಬಂಧ?” ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಪ್ರಸ್ತುತ ರಾಜ್ಯದಲ್ಲಿ ಸಂಘ ಪರಿವಾರದ ಕುರಿತು ಚರ್ಚೆಯಾಗುತ್ತಿದೆ. ಅದರ ಬಗ್ಗೆ ತಿಳಿಯಲೆಂದು ವಿಚಾರ ಪ್ರಸ್ತಾಪ ಮಾಡಿದ್ದೇವೆ” ಎಂದು ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.

“ವಿವಾದ ಬೆಳೆಸಲೆಂದು ಈ ವಿಚಾರವನ್ನು ತರಲಾಗಿದೆಯೇ?” ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾದವಿಲ್ಲದೇ ಏನಾದರೂ ಸಾಧ್ಯವಾಗುತ್ತದೆಯೇ? 32 ವರ್ಷಗಳಿಂದ ರಂಗಾಯಣದಲ್ಲಿ ಏನು ಚರ್ಚೆ ನಡೆದಿದೆ ನಿಮಗೂ ಗೊತ್ತಿದೆ. ಆರ್‌ಎಸ್‌ಎಸ್‌ ಕುರಿತು ಚರ್ಚೆಯಾದರೇ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ ಪ್ರಾಂತೀಯ ಸರ ಸಂಚಾಲಕರಾದ ಮಾ.ವೆಂಕಟರಾಮ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಾನೇಕೆ ಆರ್‌ಎಸ್‌ಎಸ್‌ನಲ್ಲಿ ಇದ್ದೇನೆ ಎಂಬ ವಿಷಯದ ಕುರಿತು ಮಾತಾಡಲಿದ್ದಾರೆ. ಸಂವಾದದ ವೇಳೆ ಅವರಿಗೆ ಪ್ರಶ್ನೆ ಕೇಳಬಹುದು. ಚರ್ಚೆಯಾದರೇ ತಪ್ಪೇನು? ರಂಗಾಯಣದಲ್ಲಿ ಒಂದೇ ವಿಚಾರ ಚರ್ಚೆಯಾಗಬೇಕೆ?” ಎಂದೂ ಪ್ರತಿಕ್ರಿಯಿಸಿದ್ದಾರೆ.

ಏನಿದು ಗ್ರೀಷ್ಮ ರಂಗೋತ್ಸವ?

“ರಂಗಾಯಣ ಮೈಸೂರು ತನ್ನ ಚಟುವಟಿಕೆಯನ್ನು ನಿರಂತರಗೊಳಿಸಲು ಸದಾ ಪ್ರಯತ್ನಿಸುತ್ತಿರುತ್ತದೆ. ಮಳೆಗಾಲ ಸಮೀಪಿಸುತ್ತಿದ್ದಂತೆ ಗ್ರೀಷ್ಮ ಋತುವಿನಲ್ಲಿ ರಂಗಾಯಣದಲ್ಲಿ ಈಗಾಗಲೇ ಸಿದ್ಧಪಡಿಸಿ ಪ್ರದರ್ಶನಗೊಂಡಿರುವ ನಾಟಕಗಳ ಹಬ್ಬ ಆಚರಿಸಲು ರ್ನಿರಿಸಲಾಗಿದೆ. ಅದೇ ಗ್ರೀಷ್ಮ ರಂಗಾಯಣೋತ್ಸವ” ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

‘ಭಾರತೀಯ ರಂಗವಿದ್ಯಾಲಯ’ದ 2021-22ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆದಿದ್ದು, ಒಂದು ವರ್ಷದ ರಂಗಶಿಕ್ಷಣ ಡಿಪ್ಲೊಮಾ ಮುಗಿದಿದೆ. ಎರಡು ಚಾತುರ್ಮಾಸಗಳಲ್ಲಿ ಸಿದ್ಧಪಡಿಸಲಾಗದ ನಾಲ್ಕು ನಾಟಕಗಳಾದ- ‘ಪ್ರಮೀಳಾರ್ಜುನೀಯಂ’, ‘ವಾಸಾಂಸಿ ಜೀರ್ಣಾನಿ’, ‘ಬೆಕ್ಕು ಬಾವಿ’, ‘ವಿದಿಶಾ ಪ್ರಹಸನ’- ಪ್ರದರ್ಶನ ಆಯೋಜಿಸಲಾಗಿದೆ. ಇದರ ಜೊತೆಗೆ ಕಿರಿಯ ರೆಪರ್ಟರಿ ಕಲಾವಿದರಿಂದ- ‘ಕೃಷ್ಣೇಗೌಡನ ಆನೆ’, ‘ಮೂಕನ ಮಕ್ಕಳ’ ನಾಟಕಗಳನ್ನು, ಸಂವಿಧಾನದ ಆಶಯ ತಂಡದಿಂದ- ‘ಸೂತ್ರದಾರ’, ಹಿರಿಯ ರೆಪರ್ಟರಿ ಕಲಾವಿದರಿಂದ ‘ಮಿಸ್ಟರ್ ಬೋಗೀಸ್‌’ ನಾಟಕ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್‌ 12ರಿಂದ 19ರವರೆಗೆ ‘ಗ್ರೀಷ್ಮ ರಂಗಾಯಣೋತ್ಸವ’ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಭೂಮಿಗೀತದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ಸಂಜೆ 4ರಿಂದ 5ರವರೆಗೆ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಕಲಾವಿದರೊಂದಿಗೆ ಸಂವಾದ ಆಯೋಜಿಸಲಾಗಿದೆ. ಜೂನ್‌ 17ರಂದು ಆರ್‌ಎಸ್‌ಎಸ್‌ ಕುರಿತು ಚರ್ಚೆಯನ್ನು ಬೇಕಂತಲೇ ಆಯೋಜಿಸಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...