Homeಕರ್ನಾಟಕಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

ಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

- Advertisement -
- Advertisement -

ನವೆಂಬರ್‌ 4ರ ಶುಕ್ರವಾರದಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಪಸ್‌ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ನಿವೃತ್ತ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿಯೊಬ್ಬರ ಪ್ರಕರಣಕ್ಕೆ ತಿರುವು ಲಭಿಸಿದೆ. ಅವರನ್ನು ಉದ್ದೇಶಪೂರ್ವಕವಾಗಿ ಕಾರು ಗುದ್ದಿ ಕೊಲೆ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ತಿಳಿದುಬಂದಿದೆ.

ಎಂಬತ್ತಮೂರು ವರ್ಷದ ಮಾಜಿ ಐಬಿ ಅಧಿಕಾರಿ ಆರ್.ಎನ್. ಕುಲಕರ್ಣಿ ಅವರು ನವೆಂಬರ್‌ 4 ರಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಮ್ಮ ದಿನನಿತ್ಯದ ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವು ಕಾರು ಅಪಘಾತದ ಪರಿಣಾಮ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ಪೊಲೀಸರಿಗೆ ಇದೀಗ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳು ಅವರ ಸಾವು ಪೂರ್ವನಿಯೋಜಿತ ಕೊಲೆ ಎಂಬುವುದನ್ನು ಎತ್ತಿ ತೋರಿಸಿವೆ. ಆರ್‌‌.ಎನ್‌. ಕುಲಕರ್ಣಿ ಅವರು ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿಯಾಗಿದ್ದರು ಮತ್ತು ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ದೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಕುಲಕರ್ಣಿ ಅವರು ಮಾನಸ ಗಂಗೋತ್ರಿ ಕ್ಯಾಂಪಸ್‌ನ ಬಯೋಟೆಕ್ನಾಲಜಿ ವಿಭಾಗದ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಅವರ ಬಳಿಗೆ ಅತ್ಯಂತ ವೇಗವಾಗಿ ಬೂದು ಬಣ್ಣದ ಸೆಡಾನ್ ಕಾರು ಬರುತ್ತದೆ. ಕುಲಕರ್ಣಿ ಅವರು ವಾಹನಕ್ಕೆ ದಾರಿ ಮಾಡಿಕೊಡಲು ಪಕ್ಕಕ್ಕೆ ಚಲಿಸುತ್ತಾರಾದರೂ, ಕಾರು ಅವರಿಗೆ ಬಳಿಗೆ ನುಗ್ಗಿ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೊರಟುಹೋಗುತ್ತದೆ.

ಇದನ್ನೂ ಓದಿ: ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಮೈಸೂರಿನ ಶಾರದಾದೇವಿ ನಗರದ ನಿವಾಸಿಯಾಗಿರುವ ಆರ್.ಎನ್.ಕುಲಕರ್ಣಿ ಅವರು ಪತ್ನಿ ವತ್ಸಲಾ ಹಾಗೂ ಪುತ್ರಿ ಪರಿಣಿತಾ ಅವರನ್ನು ಅಗಲಿದ್ದಾರೆ. ಕುಲಕರ್ಣಿ ಅವರ ಅಳಿಯ ನೀಡಿದ ದೂರಿನ ಆಧಾರದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಕುಲಕರ್ಣಿ ಅವರ ಮನೆಯ ಪಕ್ಕದಲ್ಲಿ ಮನೆ ನಿರ್ಮಿಸುವಾಗ ನೆರೆಹೊರೆಯವರು ಮಾಡಿದ ಅಕ್ರಮಗಳ ಬಗ್ಗೆ ಕುಲಕರ್ಣಿ ಅವರು ತಮ್ಮ ನೆರೆಹೊರೆಯವರೊಂದಿಗೆ ಜಗಳವಾಡುತ್ತಿದ್ದರು. ನೆರೆಮನೆಯವರು ನಿರ್ಮಿಸುತ್ತಿರುವ ಮನೆ ಯೋಜನೆಯ ಲೋಪದೋಷದ ಬಗ್ಗೆ ಕುಲಕರ್ಣಿ ಅವರು ಮಹಾನಗರ ಪಾಲಿಕೆಯ ವಿರುದ್ಧ ದೂರು ನೀಡಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಗೆ ಜೀವ ಭಯವಿದೆ ಎಂದು ಮಗಳ ಬಳಿ ಹೇಳಿದ್ದ ಕುಲಕರ್ಣಿ ಅವರಿಗೆ ಅವರ ಮಗಳು ಪೊಲೀಸ್ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಲಕರ್ಣಿ ಅವರು ಪೊಲೀಸರಿಗೆ ದೂರು ನೀಡಿದ್ದರು ಮತ್ತು ತನ್ನ ನೆರೆ ಮನೆಯವರ ಸಹಚರರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಹೇಳಿದ್ದರು ಎಂದು ಅಳಿಯ ಹೇಳಿದ್ದಾರೆ. ತನ್ನನ್ನು ಹಿಂಬಾಲಿಸುತ್ತಿದೆ ಎಂದು ಶಂಕಿಸಿ ವಾಹನಗಳ ಲೈಸೆನ್ಸ್ ಪ್ಲೇಟ್ ನಂಬರ್‌ಗಳ ಪಟ್ಟಿಯನ್ನೂ ಅವರು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“83 ವರ್ಷದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಮತ್ತು ಕಾರು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ನಮಗೆ ವರದಿಯಾಗಿದೆ. ಇದು ಹಿಟ್ ಅಂಡ್ ರನ್ ಕೇಸ್ ಎಂದು ನಾವು ನಂಬಿದ್ದೆವು, ಆದರೆ ಈ ಬಗ್ಗೆ ನಾವು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಅದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯದಂತೆ ಕಾಣುತ್ತದೆ. ಅವರು ರಸ್ತೆ ಬದಿಗೆ ಸರಿದರೂ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅದರ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅವರು ನಿವೃತ್ತರಾಗಿ 23 ವರ್ಷಗಳಾಗಿದ್ದು, ಇದು ಯಾಕೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ” ಎಂದು ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ ಹೇಳಿದ್ದಾರೆ.

ನರಸಿಂಹರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಕುಲಕರ್ಣಿ ಅವರಿಗೆ ಡಿಕ್ಕಿ ಹೊಡೆದ ವಾಹನಕ್ಕೆ ನಂಬರ್‌‌ ಪ್ಲೇಟ್‌‌ ಇರಲಿಲ್ಲ ಎಂದು ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.

1998 ರಲ್ಲಿ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದ ಕುಲಕರ್ಣಿ ಅವರು ವಿವಿಧ ಹುದ್ದೆಗಳಲ್ಲಿ ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ಮಾಡಿದ್ದು, RAW ಮತ್ತು ವಿದೇಶಿ ಗುಪ್ತಚರ ಸಂಸ್ಥೆಯೊಂದಿಗೆ ಸಹ ಸೇವೆ ಸಲ್ಲಿಸಿದ್ದಾರೆ. ಅವರು ರಾಜತಾಂತ್ರಿಕ ಕಾರ್ಯಾಚರಣೆಗಳ ಭಾಗವಾಗಿದ್ದರು ಮತ್ತು ಪರವಾನಗಿ ಪಡೆದ ಪೈಲಟ್ ಆಗಿದ್ದರು.

ಇದನ್ನೂ ಓದಿ: ತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

ಮೂರು ಪುಸ್ತಕಗಳ ಲೇಖಕರಾಗಿರುವ ಅವರು, ಗುಪ್ತಚರ ಸಂಸ್ಥೆಗೆ ಸಾಂವಿಧಾನಿಕ ಅನುಮತಿಯ ಕೊರತೆಯು ಲೆಕ್ಕಪರಿಶೋಧನೆ ಮತ್ತು ಸುಧಾರಣೆಯನ್ನು ತಡೆಯುತ್ತದೆ ಎಂದು ಕುಲಕರ್ಣಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಟೆಲಿಜೆನ್ಸ್ ಬ್ಯೂರೋದ ಕಾನೂನು ಸ್ಥಾನಮಾನವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...