Homeಕರ್ನಾಟಕಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

ಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

- Advertisement -
- Advertisement -

ನವೆಂಬರ್‌ 4ರ ಶುಕ್ರವಾರದಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಪಸ್‌ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ನಿವೃತ್ತ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿಯೊಬ್ಬರ ಪ್ರಕರಣಕ್ಕೆ ತಿರುವು ಲಭಿಸಿದೆ. ಅವರನ್ನು ಉದ್ದೇಶಪೂರ್ವಕವಾಗಿ ಕಾರು ಗುದ್ದಿ ಕೊಲೆ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ತಿಳಿದುಬಂದಿದೆ.

ಎಂಬತ್ತಮೂರು ವರ್ಷದ ಮಾಜಿ ಐಬಿ ಅಧಿಕಾರಿ ಆರ್.ಎನ್. ಕುಲಕರ್ಣಿ ಅವರು ನವೆಂಬರ್‌ 4 ರಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಮ್ಮ ದಿನನಿತ್ಯದ ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವು ಕಾರು ಅಪಘಾತದ ಪರಿಣಾಮ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ಪೊಲೀಸರಿಗೆ ಇದೀಗ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳು ಅವರ ಸಾವು ಪೂರ್ವನಿಯೋಜಿತ ಕೊಲೆ ಎಂಬುವುದನ್ನು ಎತ್ತಿ ತೋರಿಸಿವೆ. ಆರ್‌‌.ಎನ್‌. ಕುಲಕರ್ಣಿ ಅವರು ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿಯಾಗಿದ್ದರು ಮತ್ತು ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ದೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಕುಲಕರ್ಣಿ ಅವರು ಮಾನಸ ಗಂಗೋತ್ರಿ ಕ್ಯಾಂಪಸ್‌ನ ಬಯೋಟೆಕ್ನಾಲಜಿ ವಿಭಾಗದ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಅವರ ಬಳಿಗೆ ಅತ್ಯಂತ ವೇಗವಾಗಿ ಬೂದು ಬಣ್ಣದ ಸೆಡಾನ್ ಕಾರು ಬರುತ್ತದೆ. ಕುಲಕರ್ಣಿ ಅವರು ವಾಹನಕ್ಕೆ ದಾರಿ ಮಾಡಿಕೊಡಲು ಪಕ್ಕಕ್ಕೆ ಚಲಿಸುತ್ತಾರಾದರೂ, ಕಾರು ಅವರಿಗೆ ಬಳಿಗೆ ನುಗ್ಗಿ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೊರಟುಹೋಗುತ್ತದೆ.

ಇದನ್ನೂ ಓದಿ: ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಮೈಸೂರಿನ ಶಾರದಾದೇವಿ ನಗರದ ನಿವಾಸಿಯಾಗಿರುವ ಆರ್.ಎನ್.ಕುಲಕರ್ಣಿ ಅವರು ಪತ್ನಿ ವತ್ಸಲಾ ಹಾಗೂ ಪುತ್ರಿ ಪರಿಣಿತಾ ಅವರನ್ನು ಅಗಲಿದ್ದಾರೆ. ಕುಲಕರ್ಣಿ ಅವರ ಅಳಿಯ ನೀಡಿದ ದೂರಿನ ಆಧಾರದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಕುಲಕರ್ಣಿ ಅವರ ಮನೆಯ ಪಕ್ಕದಲ್ಲಿ ಮನೆ ನಿರ್ಮಿಸುವಾಗ ನೆರೆಹೊರೆಯವರು ಮಾಡಿದ ಅಕ್ರಮಗಳ ಬಗ್ಗೆ ಕುಲಕರ್ಣಿ ಅವರು ತಮ್ಮ ನೆರೆಹೊರೆಯವರೊಂದಿಗೆ ಜಗಳವಾಡುತ್ತಿದ್ದರು. ನೆರೆಮನೆಯವರು ನಿರ್ಮಿಸುತ್ತಿರುವ ಮನೆ ಯೋಜನೆಯ ಲೋಪದೋಷದ ಬಗ್ಗೆ ಕುಲಕರ್ಣಿ ಅವರು ಮಹಾನಗರ ಪಾಲಿಕೆಯ ವಿರುದ್ಧ ದೂರು ನೀಡಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಗೆ ಜೀವ ಭಯವಿದೆ ಎಂದು ಮಗಳ ಬಳಿ ಹೇಳಿದ್ದ ಕುಲಕರ್ಣಿ ಅವರಿಗೆ ಅವರ ಮಗಳು ಪೊಲೀಸ್ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಲಕರ್ಣಿ ಅವರು ಪೊಲೀಸರಿಗೆ ದೂರು ನೀಡಿದ್ದರು ಮತ್ತು ತನ್ನ ನೆರೆ ಮನೆಯವರ ಸಹಚರರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಹೇಳಿದ್ದರು ಎಂದು ಅಳಿಯ ಹೇಳಿದ್ದಾರೆ. ತನ್ನನ್ನು ಹಿಂಬಾಲಿಸುತ್ತಿದೆ ಎಂದು ಶಂಕಿಸಿ ವಾಹನಗಳ ಲೈಸೆನ್ಸ್ ಪ್ಲೇಟ್ ನಂಬರ್‌ಗಳ ಪಟ್ಟಿಯನ್ನೂ ಅವರು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“83 ವರ್ಷದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಮತ್ತು ಕಾರು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ನಮಗೆ ವರದಿಯಾಗಿದೆ. ಇದು ಹಿಟ್ ಅಂಡ್ ರನ್ ಕೇಸ್ ಎಂದು ನಾವು ನಂಬಿದ್ದೆವು, ಆದರೆ ಈ ಬಗ್ಗೆ ನಾವು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಅದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯದಂತೆ ಕಾಣುತ್ತದೆ. ಅವರು ರಸ್ತೆ ಬದಿಗೆ ಸರಿದರೂ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅದರ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅವರು ನಿವೃತ್ತರಾಗಿ 23 ವರ್ಷಗಳಾಗಿದ್ದು, ಇದು ಯಾಕೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ” ಎಂದು ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ ಹೇಳಿದ್ದಾರೆ.

ನರಸಿಂಹರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಕುಲಕರ್ಣಿ ಅವರಿಗೆ ಡಿಕ್ಕಿ ಹೊಡೆದ ವಾಹನಕ್ಕೆ ನಂಬರ್‌‌ ಪ್ಲೇಟ್‌‌ ಇರಲಿಲ್ಲ ಎಂದು ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.

1998 ರಲ್ಲಿ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದ ಕುಲಕರ್ಣಿ ಅವರು ವಿವಿಧ ಹುದ್ದೆಗಳಲ್ಲಿ ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ಮಾಡಿದ್ದು, RAW ಮತ್ತು ವಿದೇಶಿ ಗುಪ್ತಚರ ಸಂಸ್ಥೆಯೊಂದಿಗೆ ಸಹ ಸೇವೆ ಸಲ್ಲಿಸಿದ್ದಾರೆ. ಅವರು ರಾಜತಾಂತ್ರಿಕ ಕಾರ್ಯಾಚರಣೆಗಳ ಭಾಗವಾಗಿದ್ದರು ಮತ್ತು ಪರವಾನಗಿ ಪಡೆದ ಪೈಲಟ್ ಆಗಿದ್ದರು.

ಇದನ್ನೂ ಓದಿ: ತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

ಮೂರು ಪುಸ್ತಕಗಳ ಲೇಖಕರಾಗಿರುವ ಅವರು, ಗುಪ್ತಚರ ಸಂಸ್ಥೆಗೆ ಸಾಂವಿಧಾನಿಕ ಅನುಮತಿಯ ಕೊರತೆಯು ಲೆಕ್ಕಪರಿಶೋಧನೆ ಮತ್ತು ಸುಧಾರಣೆಯನ್ನು ತಡೆಯುತ್ತದೆ ಎಂದು ಕುಲಕರ್ಣಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಟೆಲಿಜೆನ್ಸ್ ಬ್ಯೂರೋದ ಕಾನೂನು ಸ್ಥಾನಮಾನವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...