Homeಕರ್ನಾಟಕಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

ಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

- Advertisement -
- Advertisement -

ನವೆಂಬರ್‌ 4ರ ಶುಕ್ರವಾರದಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಪಸ್‌ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ನಿವೃತ್ತ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿಯೊಬ್ಬರ ಪ್ರಕರಣಕ್ಕೆ ತಿರುವು ಲಭಿಸಿದೆ. ಅವರನ್ನು ಉದ್ದೇಶಪೂರ್ವಕವಾಗಿ ಕಾರು ಗುದ್ದಿ ಕೊಲೆ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ತಿಳಿದುಬಂದಿದೆ.

ಎಂಬತ್ತಮೂರು ವರ್ಷದ ಮಾಜಿ ಐಬಿ ಅಧಿಕಾರಿ ಆರ್.ಎನ್. ಕುಲಕರ್ಣಿ ಅವರು ನವೆಂಬರ್‌ 4 ರಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಮ್ಮ ದಿನನಿತ್ಯದ ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವು ಕಾರು ಅಪಘಾತದ ಪರಿಣಾಮ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ಪೊಲೀಸರಿಗೆ ಇದೀಗ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳು ಅವರ ಸಾವು ಪೂರ್ವನಿಯೋಜಿತ ಕೊಲೆ ಎಂಬುವುದನ್ನು ಎತ್ತಿ ತೋರಿಸಿವೆ. ಆರ್‌‌.ಎನ್‌. ಕುಲಕರ್ಣಿ ಅವರು ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿಯಾಗಿದ್ದರು ಮತ್ತು ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ದೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಕುಲಕರ್ಣಿ ಅವರು ಮಾನಸ ಗಂಗೋತ್ರಿ ಕ್ಯಾಂಪಸ್‌ನ ಬಯೋಟೆಕ್ನಾಲಜಿ ವಿಭಾಗದ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಅವರ ಬಳಿಗೆ ಅತ್ಯಂತ ವೇಗವಾಗಿ ಬೂದು ಬಣ್ಣದ ಸೆಡಾನ್ ಕಾರು ಬರುತ್ತದೆ. ಕುಲಕರ್ಣಿ ಅವರು ವಾಹನಕ್ಕೆ ದಾರಿ ಮಾಡಿಕೊಡಲು ಪಕ್ಕಕ್ಕೆ ಚಲಿಸುತ್ತಾರಾದರೂ, ಕಾರು ಅವರಿಗೆ ಬಳಿಗೆ ನುಗ್ಗಿ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೊರಟುಹೋಗುತ್ತದೆ.

ಇದನ್ನೂ ಓದಿ: ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಮೈಸೂರಿನ ಶಾರದಾದೇವಿ ನಗರದ ನಿವಾಸಿಯಾಗಿರುವ ಆರ್.ಎನ್.ಕುಲಕರ್ಣಿ ಅವರು ಪತ್ನಿ ವತ್ಸಲಾ ಹಾಗೂ ಪುತ್ರಿ ಪರಿಣಿತಾ ಅವರನ್ನು ಅಗಲಿದ್ದಾರೆ. ಕುಲಕರ್ಣಿ ಅವರ ಅಳಿಯ ನೀಡಿದ ದೂರಿನ ಆಧಾರದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಕುಲಕರ್ಣಿ ಅವರ ಮನೆಯ ಪಕ್ಕದಲ್ಲಿ ಮನೆ ನಿರ್ಮಿಸುವಾಗ ನೆರೆಹೊರೆಯವರು ಮಾಡಿದ ಅಕ್ರಮಗಳ ಬಗ್ಗೆ ಕುಲಕರ್ಣಿ ಅವರು ತಮ್ಮ ನೆರೆಹೊರೆಯವರೊಂದಿಗೆ ಜಗಳವಾಡುತ್ತಿದ್ದರು. ನೆರೆಮನೆಯವರು ನಿರ್ಮಿಸುತ್ತಿರುವ ಮನೆ ಯೋಜನೆಯ ಲೋಪದೋಷದ ಬಗ್ಗೆ ಕುಲಕರ್ಣಿ ಅವರು ಮಹಾನಗರ ಪಾಲಿಕೆಯ ವಿರುದ್ಧ ದೂರು ನೀಡಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಗೆ ಜೀವ ಭಯವಿದೆ ಎಂದು ಮಗಳ ಬಳಿ ಹೇಳಿದ್ದ ಕುಲಕರ್ಣಿ ಅವರಿಗೆ ಅವರ ಮಗಳು ಪೊಲೀಸ್ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಲಕರ್ಣಿ ಅವರು ಪೊಲೀಸರಿಗೆ ದೂರು ನೀಡಿದ್ದರು ಮತ್ತು ತನ್ನ ನೆರೆ ಮನೆಯವರ ಸಹಚರರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಹೇಳಿದ್ದರು ಎಂದು ಅಳಿಯ ಹೇಳಿದ್ದಾರೆ. ತನ್ನನ್ನು ಹಿಂಬಾಲಿಸುತ್ತಿದೆ ಎಂದು ಶಂಕಿಸಿ ವಾಹನಗಳ ಲೈಸೆನ್ಸ್ ಪ್ಲೇಟ್ ನಂಬರ್‌ಗಳ ಪಟ್ಟಿಯನ್ನೂ ಅವರು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“83 ವರ್ಷದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಮತ್ತು ಕಾರು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ನಮಗೆ ವರದಿಯಾಗಿದೆ. ಇದು ಹಿಟ್ ಅಂಡ್ ರನ್ ಕೇಸ್ ಎಂದು ನಾವು ನಂಬಿದ್ದೆವು, ಆದರೆ ಈ ಬಗ್ಗೆ ನಾವು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಅದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯದಂತೆ ಕಾಣುತ್ತದೆ. ಅವರು ರಸ್ತೆ ಬದಿಗೆ ಸರಿದರೂ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅದರ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅವರು ನಿವೃತ್ತರಾಗಿ 23 ವರ್ಷಗಳಾಗಿದ್ದು, ಇದು ಯಾಕೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ” ಎಂದು ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ ಹೇಳಿದ್ದಾರೆ.

ನರಸಿಂಹರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಕುಲಕರ್ಣಿ ಅವರಿಗೆ ಡಿಕ್ಕಿ ಹೊಡೆದ ವಾಹನಕ್ಕೆ ನಂಬರ್‌‌ ಪ್ಲೇಟ್‌‌ ಇರಲಿಲ್ಲ ಎಂದು ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.

1998 ರಲ್ಲಿ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದ ಕುಲಕರ್ಣಿ ಅವರು ವಿವಿಧ ಹುದ್ದೆಗಳಲ್ಲಿ ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ಮಾಡಿದ್ದು, RAW ಮತ್ತು ವಿದೇಶಿ ಗುಪ್ತಚರ ಸಂಸ್ಥೆಯೊಂದಿಗೆ ಸಹ ಸೇವೆ ಸಲ್ಲಿಸಿದ್ದಾರೆ. ಅವರು ರಾಜತಾಂತ್ರಿಕ ಕಾರ್ಯಾಚರಣೆಗಳ ಭಾಗವಾಗಿದ್ದರು ಮತ್ತು ಪರವಾನಗಿ ಪಡೆದ ಪೈಲಟ್ ಆಗಿದ್ದರು.

ಇದನ್ನೂ ಓದಿ: ತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

ಮೂರು ಪುಸ್ತಕಗಳ ಲೇಖಕರಾಗಿರುವ ಅವರು, ಗುಪ್ತಚರ ಸಂಸ್ಥೆಗೆ ಸಾಂವಿಧಾನಿಕ ಅನುಮತಿಯ ಕೊರತೆಯು ಲೆಕ್ಕಪರಿಶೋಧನೆ ಮತ್ತು ಸುಧಾರಣೆಯನ್ನು ತಡೆಯುತ್ತದೆ ಎಂದು ಕುಲಕರ್ಣಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಟೆಲಿಜೆನ್ಸ್ ಬ್ಯೂರೋದ ಕಾನೂನು ಸ್ಥಾನಮಾನವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...