Homeಕರ್ನಾಟಕಮೈಸೂರು: ಜ.25ರಿಂದ ‘ನಿರಂತರ ರಂಗ ಉತ್ಸವ’, ಐದು ನಾಟಕಗಳ ಪ್ರದರ್ಶನ

ಮೈಸೂರು: ಜ.25ರಿಂದ ‘ನಿರಂತರ ರಂಗ ಉತ್ಸವ’, ಐದು ನಾಟಕಗಳ ಪ್ರದರ್ಶನ

ಉತ್ಸವದಲ್ಲಿ ಪ್ರದರ್ಶನವಾಗುವ ಐದು ನಾಟಕಗಳ ಪರಿಚಯ ಇಲ್ಲಿದೆ

- Advertisement -
- Advertisement -

ಮೈಸೂರು: ನಿರಂತರ ಫೌಂಡೇಶನ್ ಆಯೋಜಿಸುತ್ತಾ ಬರುತ್ತಿರುವ ಪ್ರತಿಷ್ಟಿತ ‘ನಿರಂತರ ರಂಗ ಉತ್ಸವ’ ಈ ಬಾರಿ ಜನವರಿ 25ರಿಂದ ಜ.29ರವರೆಗೆ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ನಡೆಯಲಿದೆ.

ಪ್ರತಿದಿನ ಸಂಜೆ ಏಳು ಗಂಟೆಗೆ ಒಂದೊಂದು ನಾಟಕವನ್ನು ಪ್ರದರ್ಶಿಸಲಾಗುತ್ತದೆ. ಜ.25ರಂದು ಸಂಜೆ 6.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ನಿರಂತರ ಸಂಸ್ಥೆಯ ಪ್ರಸಾದ್ ಕುಂದೂರು ಪಾಲ್ಗೊಳ್ಳಲಿದ್ದಾರೆ.

ಜ.26ರಂದು ಪ್ರಜಾವಾಣಿ ಮೈಸೂರು ಬ್ಯುರೋ ಸಂಪಾದಕರಾದ ಕೆ.ನರಸಿಂಹಮೂರ್ತಿ, ಜ.27ರಂದು ಶಿಕ್ಷಣತಜ್ಞ ನಾ.ದಿವಾಕರ್‌, ಹಿರಿಯ ರಂಗಕರ್ಮಿ ಇಂದಿರಾ ನಾಯರ್‌, ಜ.28ರಂದು ಡಾ.ಡಿ.ಬಿ.ನಟೇಶ್‌, ಬೆಂಗಳೂರು ಹಸಿರು ಫೌಂಡೇಷನ್‌ನ ಹೊನ್ಗಳ್ಳಿ ಗಂಗಾಧರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜ.29ರಂದು ಸಂಜೆ 6.15ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು ಕವಿ ಆರಿಫ್ ರಾಜ್‌, ಬಿಬಿಎಂಪಿ ವಿಶೇಷ ಆಯುಕ್ತ, ಮಂತ್ರಿಮಂತ್ರಿಯವರ ಕಾರ್ಯದರ್ಶಿ ಜಯರಾಮ್ ರಾಯಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸುದರ್ಶನ್, ನಿರಂತರ ಸಂಸ್ಥೆಯ ಶ್ರೀನಿವಾಸ್ ಪಾಲಹಳ್ಳಿ ಹಾಜರಿರುವರು.

ಪ್ರದರ್ಶನವಾಗುವ ನಾಟಕಗಳ ವಿವರ

ಜನವರಿ 25
ನಾಟಕ: ಶಾಂತಕವಿಗಳ ವಿಶ್ರಾಂತಿ
ತಂಡ: ಗೊಂಬೆಮನೆ, ಧಾರವಾಡ
ರಚನೆ & ನಿರ್ದೇಶನ: ಪ್ರಕಾಶ್ ಗರುಡ

ನಾಟಕದ ಬಗ್ಗೆ: ಇದು ಕನ್ನಡದ ಆದ್ಯ ನಾಟಕಕಾರ ಎಂದು ಹೆಸರಾದ ಸಕ್ಕರಿ ಬಾಳಾಚಾರ್ಯ ‘ಶಾಂತಕವಿ’ಗಳ ಜೀವನ-ಸಾಧನೆಗಳ ಕುರಿತಾದ ನಾಟಕ. ಹೆಸರೇ ಸೂಚಿಸುವಂತೆ ಶಾಂತಕವಿಗಳು ಉರ್ಫ್ ಸಕ್ಕರಿ ಬಾಳಾಚಾರ್ಯರೇ ಇದರ ಕೇಂದ್ರ ಪಾತ್ರ. ಐತಿಹಾಸಿಕ ವಿವರಗಳನ್ನು ಒಳಗೊಂಡಿರುವುದರಿಂದ ಇದನ್ನು ದಾಖಲಾತೀ ನಾಟಿಕೆ ಎಂದು ಕರೆಯಲಾಗಿದೆ. ನಾಟಿಕಾ ಎಂಬ ಪದದ ಪ್ರಯೋಗವು ಭರತಮುನಿಯ ನಾಟ್ಯಶಾಸ್ತ್ರ (ಅಧ್ಯಾಯ 20)ದಲ್ಲಿಯೂ ಮತ್ತು ಧನಂಜಯನ ದಶರೂಪಕ (ಪ್ರಕಾಶ- 3)ದಲ್ಲಿಯೂ ಕಂಡುಬರುತ್ತದೆ. ಈ ನಾಟಕ ಶಾಂತಕವಿಗಳ ಕನ್ನಡತ್ವದ ಶೋಧನೆಗಾಗಿ ಹೊಸ ರಂಗಭೂಮಿಯನ್ನು ಕಟ್ಟಲು ಅವರು ಪಟ್ಟಶ್ರಮ ಎದುರಿಸಿದ ಬಿಕ್ಕಟ್ಟುಗಳನ್ನು ಅವರ ಜೀವನದಲ್ಲಿ ನಡೆದ ಕೆಲವು ನೈಜ ಘಟನೆಗಳ ಹಿನ್ನೆಲೆಯಲ್ಲಿ ಕಟ್ಟಿಕೊಡಲು ಪ್ರಸ್ತುತ ಪ್ರಯೋಗದಲ್ಲಿ ಪ್ರಯತ್ನಿಸಲಾಗಿದೆ.

***

ಜನವರಿ 26
ನಾಟಕ: ವಾರಸುದಾರಾ
ರಚನೆ: ಜಯರಾಂ ರಾಯಪುರ
ತಂಡ: ನಿರಂತರ, ಮೈಸೂರು
ನಿ: ಪ್ರಸಾದ್ ಕುಂದೂರು

ನಾಟಕದ ಬಗ್ಗೆ: ಹಿಂದೂಸ್ತಾನದ ಚರಿತ್ರೆಯಲ್ಲಿ ಮೊಘಲ್ ಸಾಮ್ರಾಜ್ಯದ ಇತಿಹಾಸ ಎಂದೂ ಮರೆಯಲಾಗದ ಅಧ್ಯಾಯ. ಟರ್ಕಿಯಿಂದ ಬಂದ ತೈಮೂರ್ ವಂಶಸ್ಥರಾದರೂ, ಈ ಭಾರತೀಯ ನೆಲದ ಸಂಸ್ಕೃತಿ-ಸಂಘರ್ಷಗಳನ್ನು, ಭಾವೈಕ್ಯತೆಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಲೇ, ಬೃಹತ್ ಸಾಮ್ರಾಜ್ಯದ ಒಡೆತನ ಹೊಂದಿದ್ದ ಮೊಘಲರು, ಮೌರ್ಯರ ನಂತರ ಅಖಂಡ ಹಿಂದೂಸ್ತಾನವನ್ನು ಆಳಿದವರು. ಸರ್ವ ಧರ್ಮಗಳ ಗೌರವಿಸಿ ಪೊರೆಯುವ ಅಕ್ಬರ್‌ನ ಧಾರ್ಮಿಕ ಮತ್ತು ರಾಜಕೀಯ ಚಿಂತನೆಗಳು ಶಹಜಹಾನ್ ಮತ್ತು ಅವನ ಅತ್ಯಂತ ಪ್ರೀತಿಯ ಹಿರಿಯ ಮಗ ದಾರಶಿಕೋನ ಮರಣದಲ್ಲಿ ಪರ್ಯಾವಸನಗೊಳ್ಳುತ್ತದೆ. ಶಹಜಹಾನನ ನಾಲ್ಕು ಮಕ್ಕಳಾದ ದಾರಶಿಕೋ, ಮುರಾದ್, ಶೂಜ, ಜೌರಂಗಜೇಬನಿಗೆ ಮೊಘಲ್ ಹಾಗೂ ಹಿಂದುಸ್ತಾನದ ಬಾದಶಹ ಆಗಬೇಕಾದರೆ ತಮ್ಮ ಅಣ್ಣತಮ್ಮಂದಿರನ್ನೇ ಕೊಂದು ಗಾದಿ ಹಿಡಿಯಬೇಕು. ಇಲ್ಲವಾದರೆ ಪ್ರಾಣ ಕಳೆದುಕೊಂಡು ಪಟ್ಟ ಏರುವವನಿಗೆ ಮೆಟ್ಟಿಲಾಗಬೇಕು. ಹೀಗೆ ತೈಮೂರ್ ವಂಶವಳಿಯ ಈ ರಾಜಕೀಯ ದುರಂತದ ಚರಿತ್ರೆಯೊಳಗೆ ಯಾರು ಶಹಜಹಾನನ ನಂತರ ಮಯೂರ ಸಿಂಹಾಸನದ ಮೇಲೆ ಕೂತು ಅಖಂಡ ಹಿಂದೂಸ್ತಾನವನ್ನು ಆಳಲು ಯೋಗ್ಯರೋ ಎಂದು ಯುದ್ಧವೇ ನಿರ್ಧರಿಸಬೇಕಾಗುತ್ತದೆ. ಇಂತಹ ಮೊಘಲ್ ಸುಲ್ತಾನತ್ತಿಗಾಗಿ ನಡೆದ ರೋಚಕ ಕಾಳಗದ ಕಥನವೇ “ವಾರಸುದಾರಾ”.

****

ಜನವರಿ 27
ನಾಟಕ: ನವಿಲು ಪುರಾಣ
ರಚನೆ: ಪ್ರೊ.ಕೆ.ಈ.ರಾಧಾಕೃಷ್ಣ
ತಂಡ: ಅನೇಕ, ಬೆಂಗಳೂರುನಿ: ಸುರೇಶ್ ಆನಗಳ್ಳಿ

ನಾಟಕದ ಬಗ್ಗೆ: ಮಹಾನ್ ಉರ್ದು ಲೇಖಕ ಇನ್ತಿಜಾರ್ ಹುಸೇನರ ಕತೆಯಿಂದ ಪ್ರೇರಿತವಾದ ‘ನವಿಲು ಪುರಾಣ’ವನ್ನು ಕನ್ನಡದಲ್ಲಿ ಕಥಾರೂಪಕವಾಗಿ ರಚಿಸಿದವರು- ಸಾಂಸ್ಕೃತಿಕ ಲೋಕದಲ್ಲಿ ಕ್ರಿಯಾಶೀಲವಾಗಿರುವ ಪ್ರೊ.ಕೆ.ಈ.ರಾಧಾಕೃಷ್ಣ ಅವರು. ರಂಗ ಪ್ರದರ್ಶನಕ್ಕೆ ಪರಿಕಲ್ಪಿಸಿ ಅಳವಡಿಸಿದವರು ಮತ್ತು ನಿರ್ದೇಶಿಸಿದವರು, ನಾಡಿನ ಶ್ರೇಷ್ಠ ರಂಗತಪಸ್ವಿ ಸುರೇಶ್ ಅನಗಳ್ಳಿಯವರು.

ವಿನಾಶಕಾರಿ ಯುದ್ಧದ ಪರಿಣಾಮವಾಗಿ ನೆಲೆ ಕಳೆದುಕೊಂಡು ನಿರಾಶ್ರಿತವಾದ ನವಿಲು – ಈ ನಾಟಕದ ಕೇಂದ್ರ ರೂಪಕ. ಈ ರೂಪಕದ ಸುತ್ತ – ಪುರಾಣ, ಇತಿಹಾಸ, ವರ್ತಮಾನ ಕಾಲಘಟ್ಟಗಳ ಹಲವಾರು ಘಟನೆಗಳು ಬಿಚ್ಚಿಕೊಳ್ಳುತ್ತವೆ. ಯುದ್ಧವೆಂದರೆ ಪರರ ನೆಲವನ್ನು, ಸಂಪತ್ತನ್ನು ಕಸಿದುಕೊಳ್ಳುವ ದುಷ್ಟರ ಹುನ್ನಾರವೇ ತಾನೇ? ಬಲಾಢ್ಯರು ಸೃಷ್ಟಿಸುವ ಇಂತಹ ಯುದ್ಧೋನ್ಮಾದ ಹಾಗೂ ಅದರ ಪರಿಣಾಮವಾಗಿ ದುರ್ಬಲರು ತಮ್ಮ ನೆಲೆ ಕಳೆದುಕೊಂಡು ನಿರಾಶ್ರಿತರಾಗುವ ಧಾರುಣ ವಿದ್ಯಮಾನಗಳಿಗೆ ಮೂಕ ಸಾಕ್ಷಿಯಾಗಿ ನಿಲ್ಲುತ್ತದೆ- ಸ್ವತ: ತನ್ನ ನೆಲವನ್ನೇ ಕಳೆದುಕೊಂಡ ನವಿಲು! ನವಿಲು ಪುರಾಣವು ಯುದ್ಧದ ಪರಿಣಾಮವಾಗಿ ನೆಲವಿಹೀನರಾಗುವ ನಾಗರಿಕರ ಸಂಕಟದ ಕಥೆ ಮಾತ್ರವಲ್ಲ; ಸಕಲ ಜೀವ ಸಂಕುಲವನ್ನು ಒಳಗೊಂಡ ಪರಿಸರ ವಿನಾಶದ ಕಥೆಯೂ ಹೌದು. ಹಿಂದೊಮ್ಮೆ ತಿಳಿನೀರ ಕೊಳದಲ್ಲಿ ವಿಹರಿಸುತ್ತಿದ್ದ ರಾಜಹಂಸವು ಇಂದು ಬಡಕಲು ಬಾತುಕೋಳಿಯಾಗಿ ರೂಪಾಂತರಗೊಂಡ ವಿಷಾದದ ಎಳೆಯೂ ಈ ನಾಟಕದ ಕಥಾ ನೇಯ್ಗೆಯಲ್ಲಿದೆ.

ನವಿಲು ಪುರಾಣ ಪ್ರಯೋಗ ವಿನ್ಯಾಸದ ಕುರಿತು: ಈ ನಾಟಕದಲ್ಲಿ ರಂಗಭೂಮಿಗೆ ವಿಶಿಷ್ಟವಾದ ನಾಟಕೀಯ ಸಂಭಾಷಣೆಯ ಬದಲಿಗೆ, ಸಣ್ಣ ಕಥಾ ಸಾಹಿತ್ಯ ಪ್ರಕಾರದಲ್ಲಿ ಬಳಕೆಯಾಗುವ ಕಥನ ನಿರೂಪಣಾ ಶೈಲಿಗೆ ಒತ್ತು ಕೊಡಲಾಗಿದೆ. ಅಂದರೆ, ನಟನು ತಾನು ನಿರ್ವಹಿಸಬೇಕಾದ ಕ್ರಿಯೆಗಳನ್ನು ಪಾತ್ರದ ಹೊರ ನಿಂತು ನಿರೂಪಿಸಲಾಗುತ್ತದೆ ಹಾಗೂ ಮರುಕ್ಷಣವೇ ಪಾತ್ರವಾಗಿ ಮಾರ್ಪಟ್ಟು ಪಾತ್ರದ ಸಂಭಾಷಣೆಯನ್ನು ಹೇಳುತ್ತಾನೆ. ಈ ರೀತಿ ಏಕಕಾಲದಲ್ಲೇ ನಟ-ಪಾತ್ರ ದ್ವಂದ್ವ ಪ್ರಸ್ತುತಿಯ ಜೊತೆಗೆ ಸಾಕ್ಷ ಚಿತ್ರಗಳ ನೈಜ ಬಿಂಬಗಳ ತುಣುಕು; ಸಮೂಹ ನಟನೆಯ ನಾಟಕೀಯತೆ; ಅತಿ- ವಾಸ್ತವತೆಗಳ ಬೃಹತ್ ಬೊಂಬೆಗಳ ಆಟ – ಇತ್ಯಾದಿ ಹಲವು ಮಾಧ್ಯಮಗಳ ಮಿಶ್ರಣದ ಪಾಕವನ್ನು ನವಿಲು ಪುರಾಣದ ದೃಷ್ಟಾಂಶಗಳಲ್ಲಿ ಪ್ರಯೋಗಿಸಲಾಗಿದೆ.

***

ಜನವರಿ 28
ನಾಟಕ: ಮಿಸ್. ಸದಾರಮೆ
ರಚನೆ: ಬೆಳ್ಳಾವೆ ನರಹರಿ ಶಾಸ್ತ್ರಿ
ತಂಡ: ಸಮಷ್ಟಿ, ಬೆಂಗಳೂರು
ನಿ: ಮಂಜುನಾಥ ಎಲ್ ಬಡಿಗೇರ

ನಾಟಕದ ಬಗ್ಗೆ: ಮಿಸ್ ಸದಾರಮೆ ನಾಟಕವು ಬೆಳ್ಳಾವೆ ನರಹರಿ ಶಾಸ್ತ್ರಿಗಳಿಂದ ವಿರಚಿರ್ತವಾದ ಮೂಲ “ಸದಾರಮಾ ನಾಟಕಂ”ನ ಪರಿಷ್ಕೃತ ಆವೃತ್ತಿ. ಮೂಲತಃ ಈ ನಾಟಕವು ಗುಬ್ಬಿ ಕಂಪೆನಿಯಲ್ಲಿ ಸಾವಿರಾರು ಪ್ರದರ್ಶನಗಳನ್ನು ಕಂಡು ನಂತರ ಹಿರಣ್ಣಯ್ಯನವರಿಂದ ಹಲವಾರು ಪ್ರಯೋಗಗಳನ್ನು ಕಂಡು ಪ್ರಸಿದ್ದವಾಗಿದೆ. ನಂತರ ಇದನ್ನು ಕೆ ವಿ ಸುಬ್ಬಣ್ಣನವರು ಪ್ರಸ್ತುತ ಸನ್ನಿವೇಷಕ್ಕೆ ಬದಲಾಯಿಸಿ “ಮಿಸ್ ಸದಾರಮೆ” ಎಂದು ಬಿ ವಿ ಕಾರಂತರ ನಿರ್ದೇಶನದಲ್ಲಿ ನೀನಾಸಂ ತಿರುಗಾಟದಲ್ಲಿ ನೂರಾರು ಪ್ರದರ್ಶನಗಳನ್ನು ಮಾಡಿಸಿದರು. ಈ ನಾಟಕವು ಕನ್ನಡದಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದ ಇತರ ಭಾಷೆಗಳಲ್ಲೂ ಪ್ರಯೋಗವಾದ ದಾಖಲೆಗಳಿವೆ.

ವರ್ತಕ ಬಂಗಾರ ಶೆಟ್ಟಿಯ ಮಗಳಾದ ಸದಾರಮೆಯಿಂದ ಆಕರ್ಷಿತನಾದ ರಾಜಕುಮಾರ ರಾಜ್ಯ ಕೋಶಾದಿಗಳನ್ನು ಬಿಟ್ಟು ಮದುವೆಯಾಗಿ, ಅವಳೊಂದಿಗೆ ದೇಶಾಂತರ ಹೊರಟು ಹೋಗುತ್ತಾನೆ. ವಿಧಿಯ ವೈಪರೀತ್ಯದಿಂದಾಗಿ ಗಂಡ-ಹೆಂಡತಿಯರು ಒಬ್ಬರಿಂದೊಬ್ಬರು ಅಗಲಿ ಮುಗ್ದೆಯಾದ ಸದಾರಮೆ ಹಲವಾರು ಕಷ್ಟ ಕಾರ್ಪಣ್ಯಗಳಿಗೆ ಸಿಲುಕಿಕೊಳ್ಳುತ್ತಾಳೆ. ಇವನ್ನೆಲ್ಲ ಯಶಸ್ವಿಯಾಗಿ ಎದುರಿಸಿ ಕೊನೆಗೆ ಅವರು ಮತ್ತೆ ಒಂದಾಗುತ್ತಾರೆ.
ನಾಟಕ ಹಾಸ್ಯ ಸನ್ನಿವೇಶಗಳಿಂದ ಕೂಡಿದ್ದು, ಕಂಪೆನಿ ನಾಟಕ ಶೈಲಿಯ ಹಾಡುಗಳಿಂದ ವೈಭವೀಕರಿಸಲ್ಪಟ್ಟಿದೆ. ನಿರ್ದೇಶಕರು ನಾಟಕದ ಮೂಲ ಕಥೆಗೆ ಹೊಸ ವ್ಯಾಖ್ಯಾನವನ್ನು ನೀಡುವ ಪ್ರಯತ್ನವನ್ನು ಮಾಡಿದ್ದಾರೆ.

****

ಜನವರಿ 29
ನಾಟಕ: ದಕ್ಲಕಥಾ ದೇವಿಕಾವ್ಯ
ತಂಡ: ಜಂಗಮ ಕಲೆಕ್ಟಿವ್, ಬೆಂಗಳೂರು
ರಚನೆ & ನಿರ್ದೇಶನ: ಲಕ್ಷ್ಮಣ ಕೆ.ಪಿ.

ನಾಟಕದ ಬಗ್ಗೆ: ‘ದಕ್ಲ ಕಥಾ ದೇವಿ ಕಾವ್ಯ’ ಕನ್ನಡ ಮಹತ್ವದ ಬರಹಗಾರರು ಮತ್ತು ಕರ್ನಾಟಕ ‘ದಲಿತ ಸಂಘರ್ಷ ಸಮಿತಿ’ಯ ಸ್ಥಾಪಕ ಸದಸ್ಯರು ಆದ ಕೆ.ಬಿ.ಸಿದ್ಧಯ್ಯ ಅವರ ಖಂಡಕಾವ್ಯ ಮತ್ತು ಕಥನಗಳನ್ನು ಒಟ್ಟಿಗೆ ಹೊಸೆದು ಕಟ್ಟಿರುವ ರಂಗಪ್ರಯೋಗ. ತಳಾತೀತಳ ಸಮುದಾಯಗಳ ಕಲ್ಪನೆಯಲ್ಲಿ ಅರಳಿರುವ ಭೂಮಿ ಹುಟ್ಟಿದ, ಜೀವ ಹುಟ್ಟಿದ ಕಥನದಿಂದ ಆರಂಭವಾಗುವ ಈ ಪ್ರಯೋಗ, ಈ ಸಮುದಾಯಗಳ ಆಚರಣೆ ನಂಬುಗೆ, ಹಸಿವು, ಬಯಕೆ, ಹಾಡು-ಪಾಡನ್ನು ಬಿಚ್ಚಿಡುತ್ತಾ ಹರಿಯುತ್ತದೆ. ‘ನುಡಿ’ ಎನ್ನುವುದು ಈ ಸಮುದಾಯಗಳಿಗೆ ಮೈಯ್ಯನ್ನು ಬಿಟ್ಟಿರಲಾಗದ ಉಸುರಿದ್ದಂತೆ. ಅರೆ, ತಮಟೆಯಂತಹ ವಾದ್ಯಗಳು ಆ ನುಡಿಬಳ್ಳಿಯ ಕುಡಿಗಳು. ಹೀಗೆ ಅಸ್ಪೃಶ್ಯ ಜಗತ್ತು ನಾದ ಜಗತ್ತು ಕೂಡ ಹೌದು. ಹೀಗಿರುವಾಗ ಶತಮಾನಗಳಿಂದ ದೂರವಿದ್ದ ‘ಅಕ್ಷರ’ವೆಂಬ ಮತ್ತೊಂದು ಅಂಗ ಅಸ್ಪೃಶ್ಯ ಮೈ ಪ್ರಜ್ಞೆಗೆ ತಾಕಿಕೊಂಡಾಗ ಅಲ್ಲಿ ಉಂಟಾಗುವ ಪ್ರೀತಿ, ಹಗೆಯ ಸಂಬಂಧವನ್ನು ಪ್ರಯೋಗ ಎದುರಾಗುತ್ತದೆ. ಹೀಗೆ ‘ಅಸ್ಪೃಶ್ಯತೆ ಮತ್ತು ಅಕ್ಷರದ ಅನುಭವದಿಂದ ದಕ್ಕಿದ ಅರಿವಿನ ಮೂಲಕ ನಮ್ಮಾಳದ ಮನುಷ್ಯನನ್ನು ಎದುರುಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...