Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...